ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಕ್ಕೆ ಸಿಎಂ ಯಡಿಯೂರಪ್ಪ ಆದೇಶ
ಬೆಂಗಳೂರು: ರಾಜ್ಯ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಕರ ವರ್ಗಾವಣೆಯ ವೇಳಾ ಪಟ್ಟಿಯನ್ನು ಹೊರಡಿಸದ ಹಿನ್ನೆಲೆಯಲ್ಲಿ ಶಿಕ್ಷಕರು ಆತಂಕದಲ್ಲಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.
ಇಂದಿನಿಂದ ಒಂದು ವಾರದೊಳಗಾಗಿ ಶಿಕ್ಷಣ ಇಲಾಖೆಯು ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶಿಸಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.
ಬೇರೆ ಇಲಾಖೆಗಳಲ್ಲಿ ಕಾಲ ಕಾಲಕ್ಕೆ ವರ್ಗಾವಣೆಯಾಗುತ್ತಿದೆ. ಆದರೆ ಶಿಕ್ಷಣ ಇಲಾಖೆಯ ನೌಕರರಿಗೆ ತಾರತಮ್ಯ ಎಸಗಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದ ಮನವಿಯಲ್ಲಿ ತಿಳಿಸಿತ್ತು.

Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.