ದಾಖಲೆ ರಹಿತ 1.50 ಲಕ್ಷ ರೂ. ಹಣ ವಶಪಡಿಸಿಕೊಂಡ ವಿಟ್ಲ ಪೊಲೀಸರ್! - Mahanayaka

ದಾಖಲೆ ರಹಿತ 1.50 ಲಕ್ಷ ರೂ. ಹಣ ವಶಪಡಿಸಿಕೊಂಡ ವಿಟ್ಲ ಪೊಲೀಸರ್!

vittal
27/03/2023

ದಾಖಲೆ ರಹಿತವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.50 ಲಕ್ಷ ಹಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ.

ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಶೀರ್ (29) ಎಂದು ಗುರುತಿಸಲಾಗಿದೆ. ಸಾಲೆತ್ತೂರು– ಬಾಕ್ರಬೈಲು ರಸ್ತೆಯ ಮೆದು ಎಂಬಲ್ಲಿ ಕರ್ನಾಟಕ ರಾಜ್ಯದ ಚುನಾವಣೆ ಪ್ರಯುಕ್ತ ತೆರದಿರುವ ಅಂತಾರಾಜ್ಯ ಚೆಕ್‌ ಪಾಯಿಂಟ್‌ ನಲ್ಲಿ ಮಾರ್ಚ್ 26 ರಂದು ವಾಹನಗಳ ತಪಾಸಣೆ ಮಾಡುತ್ತಿದ್ದಾಗ ಇದು ಪತ್ತೆಯಾಗಿದೆ.

ಸಾಲೆತ್ತೂರು ಕಡೆಯಿಂದ ಬಾಕ್ರಬೈಲು ಕಡೆಗೆ ಬರುತ್ತಿದ್ದ ಬಶೀರ್ ಅವರ ಕಾರನ್ನು ಪೊಲೀಸರು ನಿಲ್ಲಿಸಿ ತಪಾಸಣೆ ಮಾಡಿದಾಗ ಕಾರಿನ ಡ್ಯಾಶ್‌ ಬೋರ್ಡ್‌ನಲ್ಲಿ ಒಟ್ಟು ಒಂದೂವರೆ ಲಕ್ಷ ಹಣ ಪತ್ತೆಯಾಗಿದೆ ಎನ್ನಲಾಗಿದೆ.

ಹಣದ ಬಗ್ಗೆ ವಿಚಾರಿಸಿದಾಗ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸದೇ ಇರುವುದರಿಂದ ನಗದು ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ