10 ಲಕ್ಷ ಪಾವತಿಸಿದರೂ, ಬಾಕಿ ಪಾವತಿಸಿ ಮೃತದೇಹ ಕೊಂಡೊಯ್ಯಿರಿ ಎಂದ ಆಸ್ಪತ್ರೆ!
ಬೆಂಗಳೂರು: ಬಾಕಿ ಹಣ ಪಾವತಿ ಮಾಡಲಿಲ್ಲ ಎಂಬ ಕಾರಣಕ್ಕೆ ಕುಟುಂಬಸ್ಥರಿಗೆ ಮೃತದೇಹ ನೀಡದೇ ಸತಾಯಿಸಿರುವ ಘಟನೆ ನಡೆದಿದ್ದು, ಸಚಿವರ ಮಧ್ಯಪ್ರವೇಶದಿಂದ ಕುಟುಂಬಕ್ಕೆ ಇದೀಗ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.
ಕೊರೊನಾ ಸೋಂಕಿತರಾಗಿದ್ದ ರಾಜಸ್ಥಾನ ಮೂಲದ ಭೀಮರಾವ್ ಪಾಟೀಲ್(62) ಕೊರೊನಾದಿಂದ ಮೃತಪಟ್ಟಿದ್ದರು. ಇವರು ನವೆಂಬರ್ 15ರಂದು ಆಸ್ಪತ್ರೆಗೆ ದಾಖಲಾಗಿದ್ದು, ಡಿಸೆಂಬರ್ 23ರವರೆಗೆ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದೇ ಸಾವನ್ನಪ್ಪಿದ್ದಾರೆ. ಮೃತರ ಪುತ್ರ, ಭೀಮರಾವ್ ಪಾಟೀಲ್ ದಾಖಲಾಗಿದ್ದ ಆಸ್ಪತ್ರೆಗೆ 10 ಲಕ್ಷ ರೂಪಾಯಿ ಪಾವತಿ ಮಾಡಿದ್ದರು. ಆದರೆ ಇನ್ನೂ 10 ಲಕ್ಷ ರೂಪಾಯಿ ಪಾವತಿ ಮಾಡಬೇಕು ಎಂದು ಆಸ್ಪತ್ರೆ ಹೇಳಿದ್ದು, ಮೃತದೇಹ ನೀಡಲು ನಿರಾಕರಿಸಿದೆ.
ಇದೀಗ ಆರೋಗ್ಯ ಸಚಿವ ಸುಧಾಕರ್ ಅವರ ಮಧ್ಯಪ್ರವೇಶದಿಂದ ಭೀಮ್ ರಾವ್ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳನ್ನು ಮನ್ನಾ ಮಾಡಿದೆ. ಮದ್ದೇ ಇಲ್ಲದ ಕೊರೊನಾ ವೈರಸ್ ಗೆ 20 ಲಕ್ಷ ರೂಪಾಯಿ ಬಿಲ್ ಹೇಗೆ ಆಗಿದೆ ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.