ಅಟ್ಯಾಕ್: ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಗ್ರೆನೇಡ್, 4.6 ಲಕ್ಷ ನಗದು ಸಹಿತ ಇಬ್ಬರ ಬಂಧನ - Mahanayaka
7:54 PM Saturday 25 - October 2025

ಅಟ್ಯಾಕ್: ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಗ್ರೆನೇಡ್, 4.6 ಲಕ್ಷ ನಗದು ಸಹಿತ ಇಬ್ಬರ ಬಂಧನ

26/11/2023

ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಭದ್ರತಾ ಪಡೆಗಳು ಇಬ್ಬರನ್ನು ಬಂಧಿಸಿವೆ. ಬಂಧಿತರಿಂದ ನಾಲ್ಕು ಹ್ಯಾಂಡ್ ಗ್ರೆನೇಡ್ ಗಳು ಮತ್ತು 4.6 ಲಕ್ಷ ರೂ.ಗಳ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಉರಿಯ ಜುಲಾ ಸೇತುವೆಯಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸುತ್ತಿದ್ದಾಗ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ.
ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಇವರಿಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅವರು ಗ್ರೆನೇಡ್ ಗಳನ್ನು ಯಾಕೆ ಸಾಗಿಸುತ್ತಿದ್ದರು ಎಂಬುದರ ಬಗ್ಗೆ ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗಿದೆ.
ರಾಜೌರಿ ಜಿಲ್ಲೆಯಲ್ಲಿ ನಡೆದ ಎನ್‌ ಕೌಂಟರ್ ನಲ್ಲಿ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎರಡು ದಿನಗಳ ಕಾಲ ನಡೆದ ಎನ್‌ ಕೌಂಟರ್ ನಲ್ಲಿ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಎನ್‌ ಕೌಂಟರ್ ನಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಯ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಖಾರಿ ಎಂಬ ಕೋಡ್ ಹೆಸರಿನಿಂದ ಗುರುತಿಸಲ್ಪಟ್ಟ ಎಲ್ಇಟಿಯ ಉನ್ನತ ಕಮಾಂಡರ್ ಮತ್ತು ಅವನ ಸಹಚರನನ್ನು ಕೊಲ್ಲಲಾಯಿತು. ಖಾರಿ ಕಳೆದ ವರ್ಷದಿಂದ ತನ್ನ ಗುಂಪಿನೊಂದಿಗೆ ರಾಜೌರಿ-ಪೂಂಚ್ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಅಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸಲು ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾರಿ ಧಂಗ್ರಿ ಮತ್ತು ಕಂಡಿ ಅವಳಿ ದಾಳಿಯ ಮಾಸ್ಟರ್ ಮೈಂಡ್ ಎಂದು ನಂಬಲಾಗಿದೆ. ಇದರಲ್ಲಿ ಏಳು ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ. ಇತರ 14 ಜನರು ಗಾಯಗೊಂಡಿದ್ದಾರೆ.
ಎನ್‌ಕೌಂಟರ್ ನಲ್ಲಿ ಮೃತಪಟ್ಟ ಐವರು ಸೇನಾ ಸಿಬ್ಬಂದಿಗೆ ರಾಜೌರಿಯ ರೋಮಿಯೋ ಫೋರ್ಸ್ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಪುಷ್ಪಗುಚ್ಛ ಇರಿಸುವ ಸಮಾರಂಭ ನಡೆಯಿತು.

ಇತ್ತೀಚಿನ ಸುದ್ದಿ