ಮಠಾಧೀಶರಿಗೆ ಬ್ಲ್ಯಾಕ್ ಮೇಲ್ ಪ್ರಕರಣ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ
![](https://www.mahanayaka.in/wp-content/uploads/2024/03/e400c2e384c4e053cb143193c1d93a4c0ad83221066866c787e6514f9ba3b6cd.0.jpg)
ತಮಿಳುನಾಡಿನ ಮೈಲಾಡುತುರೈನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳು ಶೈವ ಮಠ ಧರ್ಮಪುರಂ ಅಧೀನಂ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಶ್ರೀ ಲಾ ಶ್ರೀ ಮಸಿಲಾಮಣಿ ದೇಸಿಕ ಜ್ಞಾನಸಂಪಂಡ ಪರಮಾಚಾರ್ಯ ಸ್ವಾಮಿಗಳ ಸಹೋದರ ದೂರು ದಾಖಲಿಸಿದ್ದಾರೆ.
ಕೆಲವು ಪುರುಷರು ಶ್ರೀಗಳಿಗೆ ಕೆಲವು ಅಶ್ಲೀಲ ಆಡಿಯೋ ಮತ್ತು ವಿಡಿಯೋ ತುಣುಕುಗಳೊಂದಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಕೊಡಿಯರಸು, ಶ್ರೀನಿವಾಸ್, ವಿನೋದ್ ಮತ್ತು ವಿಘ್ನೇಶ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ.
ವಿನೋದ್ ಬಿಜೆಪಿ ತಂಜಾವೂರು ಉತ್ತರ ಯುವ ಘಟಕದ ಕಾರ್ಯದರ್ಶಿಯಾಗಿದ್ದು, ವಿಘ್ನೇಶ್ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth