ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ಧ: ಶಿಫಾರಸು ಮಾಡಿದ ಸಂಭಾವ್ಯರ ಪಟ್ಟಿ ಇಲ್ಲಿದೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಸಿದ್ಧಪಡಿಸಿದೆ. ಮೊದಲ ಪಟ್ಟಿಯಲ್ಲಿ 124 ಸ್ಪರ್ಧಾಳುಗಳನ್ನು ಘೋಷಿಸಿದ್ದ ಸ್ಟೀನಿಂಗ್ ಕಮಿಟಿ ಉಳಿದ ನೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ. ಅಂತಿಮ ಪಟ್ಟಿ ಏ.10 ರ ಬಳಿಕ ಪ್ರಕಟವಾಗಲಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಈ ವಿಚಾರವಾಗಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಒಂದೇ ಬಾರಿಗೆ ಉಳಿದೆಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು. ಮೂರ್ನಾಲ್ಕು ಕ್ಷೇತ್ರಗಳನ್ನು ಹೊರತುಪಡಿಸಿ, ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಊಹಾಪೋಹಗಳ ಬಗ್ಗೆ ಚರ್ಚೆ ಬೇಡ ಎಂದರು.
ಎರಡನೇ ಪಟ್ಟಿಯಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವುದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಭಾವ್ಯ ಎರಡನೇ ಕ್ಷೇತ್ರ. ಮೊದಲ ಪಟ್ಟಿಯಲ್ಲಿ ವರುಣಾ ಕ್ಷೇತ್ರದಲ್ಲಿ ಟಿಕೆಟ್ ಪಡೆದಿರುವ ಪ್ರತಿಪಕ್ಷ ನಾಯಕ, ಕೋಲಾರ ಕ್ಷೇತ್ರದ ಮೇಲೂ ಕಣ್ಣಿಟ್ಟಿದ್ದಾರೆ. ಕೋಲಾರ ಟಿಕೆಟ್ ನೀಡುವಂತೆ ಹೈಕಮಾಂಡ್ಗೂ ಮನವಿ ಮಾಡಿದ್ದಾರೆ. ಆದರೆ, ಈ ಬಗ್ಗೆ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಕೋಲಾರ ಪ್ರವಾಸ:
ವರುಣಾದಿಂದ ಟಿಕೆಟ್ ನಿಕ್ಕಿಯಾಗಿರುವ ಮಧ್ಯೆಯೇ ಸಿದ್ದರಾಮಯ್ಯ ಅವರು ಇಂದು ಕೋಲಾರ ಪ್ರವಾಸ ನಡೆಸಲಿದ್ದಾರೆ. ಇದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಏ.9 ರಂದು ಕೋಲಾರದಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಅವರ ಸಮಾವೇಶಕ್ಕಾಗಿ ಸ್ಥಳ ಪರಿಶೀಲನೆ ಹಾಗೂ ಪೂರ್ವಭಾವಿ ಸಭೆ ನಡೆಸಲು ಸಿದ್ದರಾಮಯ್ಯ ಅಲ್ಲಿಗೆ ತೆರಳಲಿದ್ದಾರೆ.
ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್
ಎರಡನೇ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ ಎನ್ನಲಾಗಿದೆ. ಐದಾರು ಕ್ಷೇತ್ರಗಳ ಬಗ್ಗೆ ಸ್ವಲ್ಪ ಗೊಂದಲ ಇದ್ದು, ಈ ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದೆ. ಪುಲಕೇಶಿನಗರ, ಸಿ.ವಿ. ರಾಮನ್ ನಗರ ಸೇರಿದಂತೆ ಕೆಲ ಕ್ಷೇತ್ರಗಳ ಬಗ್ಗೆ ಗೊಂದಲ ಇದೆ ಎಂದು ಮೂಲಗಳು ತಿಳಿಸಿವೆ.
ಶಿಫಾರಸು ಮಾಡಿದ ಸಂಭಾವ್ಯರ ಪಟ್ಟಿ ಹೀಗಿದೆ:
ನಿಪ್ಪಾಣಿ– ಕಾಕಾ ಸಾಹೇಬ್ ಪಾಟೀಲ್
ಗೋಕಾಕ್– ಅಶೋಕ್ ಪೂಜಾರಿ
ಕಿತ್ತೂರು- ಡಿ.ಬಿ.ಇಮಾನ್ದಾ
ಮುದೋಳ್ –ಆರ್ .ಬಿ .ತಿಮ್ಮಾಪುರ
ತೇರದಾಳ– ಉಮಾಶ್ರೀ
ಬೀಳಗಿ– ಜಗದೀಶ್ ಪಾಟೀಲ್
ಬಾದಾಮಿ — ಭೀಮಸೇನ ಚಿಮ್ಮನಕಟ್ಟಿ
ಸಿಂದಗಿ– ಅಶೋಕ್ ಮನಗೂಳಿ
ಗುರುಮಠಲ್ — ಬಾಬುರಾವ್ ಚಿಂಚನಸೂರ್
ಕಲಬುರಗಿ ದಕ್ಷಿಣ — ಅಲ್ಲಮ್ ಪ್ರಭು ಪಾಟೀಲ್
ಕಲಬುರಗಿ ದಕ್ಷಿಣ — ಅಲ್ಲಮ್ ಪ್ರಭು ಪಾಟೀಲ್
ಬಸವಕಲ್ಯಾಣ — ವಿಜಯ ಸಿಂಗ್
ರಾಯಚೂರು — ಎನ್.ಎಸ್ ಬೋಸರಾಜ್
ಮಾನ್ವಿ– ಹಂಪಯ್ಯ ನಾಯಕ್
ಸಿಂಧನೂರು– ಹಂಪನಗೌಡ ಬಾದರ್ಲಿ
ಗಂಗಾವತಿ– ಇಕ್ಸಾಲ್ ಅನ್ಸಾರಿ
ಕಲಘಟಗಿ– ಸಂತೋಷ ಲಾಡ್
ಹುಬ್ಬಳ್ಳಿ –ಧಾರವಾಡ ಪಶ್ಚಿಮ– ಮೋಹನ್ ಲಿಂಬಿಕಾಯಿ
ಮಂಗಳೂರು ದಕ್ಷಿಣ– ಲೋಬೋ
ಶಿರಸಿ– ಭೀಮಣ್ಣ ನಾಯ್ಕ
ಹರಿಹರ– ರಾಮಪ್ಪ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























