ಬ್ರೇಕಿಂಗ್ ನ್ಯೂಸ್: ಮೂವರು ಬಿಜೆಪಿ ಕಾರ್ಯಕರ್ತರನ್ನು ಗುಂಡುಕ್ಕಿ ಹತ್ಯೆ ಮಾಡಿದ ಭಯೋತ್ಪಾದಕರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಮುಸ್ಲಿಮ್ ಬಿಜೆಪಿ ಕಾರ್ಯಕರ್ತರನ್ನು ಭಯೋತ್ಪಾದಕರು ಹತ್ಯೆ ಗೈದಿರುವ ಘಟನೆ ನಡೆದಿದ್ದು, ಇಲ್ಲಿನ ವೈಕೆ ಪುರ ಪ್ರದೇಶದಲ್ಲಿ ಭಯೋತ್ಪಾಕರು ಬಿಜೆಪಿ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದಾರೆ.
ಇಂದು ಕಲ್ಸಮ್ ಗ್ರಾಮದ ವೈಕೆ ಪುರ ಪೊಲೀಸರು ಈ ಘಟನೆಯ ಬಗ್ಗೆ ಮಾಹಿತಿ ದೊರೆತ ಬಳಿಕ ಸ್ಥಳಕ್ಕೆ ಧಾವಿಸಿ ಹೇಳಿಕೆಗಳನ್ನು ಪಡೆದಿದ್ದಾರೆ. ಬಿಜೆಪಿ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಫಿಡಾ ಹುಸೇನ್ ಯಾತೂ, ಬಿಜೆಪಿ ಕಾರ್ಯಕರ್ತರಾದ ಉಮರ್ ರಶೀದ್ ಬೀಗ್, ಉಮರ್ ರಂಜಾನ್ ಹಜಮ್ ಭಯೋತ್ಪಾದಕರ ಗುಂಡಿಗೆ ಬಲಿಯಾದವರು. ಗುಂಡಿನ ದಾಳಿ ನಡೆದ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರಿಗೆ ಪ್ರಾಥಮಿಕ ವರದಿ ದೊರೆತಿದೆ.
ಇನ್ನೂ ಈ ಘಟನೆಯನ್ನು ಬಿಜೆಪಿಯ ಮುಸ್ಲಿಮ್ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಭಯಾನಕ ಘಟನೆ, ಈ ಘಟನೆಯನ್ನು ನಾನು ನಿಸ್ಸಂದೇಹವಾಗಿ ಖಂಡಿಸುತ್ತೇನೆ. ಅಲ್ಲಾಹನು ಅವರಿಗೆ ಜನ್ನತ್ ನೀಡಲಿ. ಇಂತಹ ಸಂದರ್ಭದಲ್ಲಿ ಮೃತರ ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ಸಿಗಲಿ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.