11:57 AM Wednesday 20 - August 2025

ಆಂಧ್ರಪ್ರದೇಶದಲ್ಲಿ ಮರಕ್ಕೆ ಕಾರು ಡಿಕ್ಕಿ: ಮೂವರು ವೈದ್ಯರು ಸಾವು

01/12/2024

ಆಂಧ್ರಪ್ರದೇಶದ ಅನಂತಪುರ-ಬಳ್ಳಾರಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ವೈದ್ಯರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ವೈದ್ಯರು ಹಾಂಗ್ ಕಾಂಗ್ ನಲ್ಲಿ ರಜೆ ಮುಗಿಸಿ ಹಿಂದಿರುಗುತ್ತಿದ್ದಾಗ ವಿಡಪನಕಲ್ಲು ಬಳಿ ಅಪಘಾತ ಸಂಭವಿಸಿದೆ. ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೈದ್ಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ವೈದ್ಯರನ್ನು ಸ್ಥಳೀಯರು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ.
ಮೃತ ವೈದ್ಯರನ್ನು ಬಳ್ಳಾರಿ ಮೂಲದ ಯೋಗೇಶ್, ಗೋವಿಂದರಾಯ ಮತ್ತು ಅಮರೇಶ್ ಎಂದು ಗುರುತಿಸಲಾಗಿದೆ.
ಮೂವರು ವೈದ್ಯರ ಹಠಾತ್ ನಿಧನಕ್ಕೆ ಭಾರತೀಯ ವೈದ್ಯರ ಸಂಘಟನೆಯಾದ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ದುಃಖ ವ್ಯಕ್ತಪಡಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version