ಬಂಧನದಲ್ಲಿ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ: ವೈದ್ಯರಿಗೆ ಕೂಡಲೇ ವರದಿ ನೀಡಲು ಸೂಚಿಸಿದ್ಯಾಕೆ..? - Mahanayaka
4:17 PM Wednesday 17 - December 2025

ಬಂಧನದಲ್ಲಿ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ: ವೈದ್ಯರಿಗೆ ಕೂಡಲೇ ವರದಿ ನೀಡಲು ಸೂಚಿಸಿದ್ಯಾಕೆ..?

16/06/2023

ಬಂಧಿತರಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಆರೋಗ್ಯವನ್ನು ಐವರು ವೈದ್ಯರ ತಂಡ ಚೆನ್ನೈಗೆ ಭೇಟಿ ನೀಡಿ ಪರೀಕ್ಷಿಸಲಿದೆ.

ಜಾರಿ ನಿರ್ದೇಶನಾಲಯದ ಕೋರಿಕೆಯ ಮೇರೆಗೆ ವೈದ್ಯರು ಪರೀಕ್ಷೆ ಮಾಡಿ ತಮ್ಮ ಸ್ವತಂತ್ರ ಅಭಿಪ್ರಾಯವನ್ನು ಏಜೆನ್ಸಿಯ ಮುಂದೆ ಸಲ್ಲಿಸಲಿದ್ದಾರೆ.

ಬಂಧಿತ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕನಿಗೆ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ ಎಂದು ಕಾವೇರಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಾಜಿ ಅವರು ಐಸಿಯುನಲ್ಲಿದ್ದಾರೆ. ಹಿರಿಯ ವೈದ್ಯಕೀಯ ಸಲಹೆಗಾರ ಕಾರ್ಡಿಯೋ ಥೊರಾಸಿಕ್ ಸರ್ಜನ್ ಡಾ.ಎ.ಆರ್.ರಘುರಾಮ್ ನೇತೃತ್ವದ ತಜ್ಞ ವೈದ್ಯರ ತಂಡವು ಅವರನ್ನು ಪರೀಕ್ಷಿಸುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

ಸೆಂಥಿಲ್ ಬಾಲಾಜಿ ಅವರನ್ನು ಕಾವೇರಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಮದ್ರಾಸ್ ಹೈಕೋರ್ಟ್ ಗುರುವಾರ ಅನುಮತಿ ನೀಡಿತ್ತು. ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸುತ್ತಿದ್ದಂತೆಯೇ ಎದೆ ನೋವಿನ ಬಗ್ಗೆ ದೂರು ನೀಡಿದ ನಂತರ ಬಾಲಾಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಾಜಿ ಅವರ ಪತ್ನಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ ವಿಭಾಗೀಯ ಪೀಠ ಮಧ್ಯಂತರ ಆದೇಶ ಕೂಡಾ ನೀಡಿದೆ. ಅದರಂತೆ ಬಾಲಾಜಿ ನ್ಯಾಯಾಂಗ ಬಂಧನದಲ್ಲಿರುತ್ತಾರೆ. ಜೊತೆಗೆ ಸಚಿವರನ್ನು ಪರೀಕ್ಷಿಸಲು ತನ್ನದೇ ಆದ ವೈದ್ಯರ ತಂಡವನ್ನು ಹೊಂದಲು ಇಡಿಗೆ ಸೂಚಿಸಲಾಗಿದೆ. ನ್ಯಾಯಾಲಯವು ಬಾಲಾಜಿಯನ್ನು ಜೂನ್ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ