ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಸಂದೇಶ ಹರಡಿದ ಆರೋಪ:  ಮಂಗಳೂರಿನಲ್ಲಿ 6 ಮಂದಿ ಅರೆಸ್ಟ್ - Mahanayaka

ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಸಂದೇಶ ಹರಡಿದ ಆರೋಪ:  ಮಂಗಳೂರಿನಲ್ಲಿ 6 ಮಂದಿ ಅರೆಸ್ಟ್

trollers
04/06/2025

ಮಂಗಳೂರು:  ಪ್ರಚೋದನಾಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಆರೋಪದಲ್ಲಿ  6 ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಹೆಜಮಾಡಿಯ ಅಸ್ಲಾಂ (23), ಕಾಟಿಪಳ್ಳದ ಚೇತನ್ (20), ಹಳೆಯಂಗಡಿ ನಿತಿನ್ ಅಡಪ (23), ಫರಂಗಿಪೇಟೆಯ ರಿಯಾಝ್ ಇಬ್ರಾಹೀಂ (30), ಕಸಬಾ ಬೆಂಗ್ರೆಯ ಜಮಾಲ್ ಝಕೀರ್(21) ಮತ್ತು ಕೊಳವೈಲ್‌ನ ಗುರುಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ.

ಅಸ್ಲಾಂ ಸೌದಿ ಅರೇಬಿಯಾದಿಂದ team_jokerzzz._ ಎಂಬ ಇನ್‌ಸ್ಟಾಗ್ರಾಂ ಮೂಲಕ ಪ್ರಚೋದನಾಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ.  ಚೇತನ್ ಎಂಬಾತ ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ನ್ನು ಬಳಸಿಕೊಂಡು team_karna_surathkal ಇನ್‌ ಸ್ಟಾಗ್ರಾಂ ಪೇಜ್‌ ನ್ನು ತೆರೆದಿದ್ದು, ಈ ಪೇಜ್‌ನಲ್ಲಿ ಚೆನ್ನಪ್ಪ ಯಾನೆ ಮುತ್ತು ಸುರತ್ಕಲ್ ಎಂಬಾತ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ.

ರಿಯಾಝ್ ಇಬಾಹೀಂ ಎಂಬಾತನು ಸೌದಿ ಅರೇಬಿಯಾದಿಂದ Beary_royal_nawab ಎಂಬ ಇನ್‌ ಸ್ಟಾಗ್ರಾಮ್ ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ. ಆರೋಪಿ ಜಮಾಲ್ ಝಾಕೀರ್ Troll_bengare_ro_makka ಇನ್‌ ಸ್ಟಾಗ್ರಾಮ್ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ . ಗುರು ಪ್ರಸಾದ್ ಎಂಬಾತ Guru dprasad Haleyangadi ಎಂಬ ಫೇಸ್ ಬುಕ್ ಖಾತೆಯ ಮುಖಾಂತರ ಸಂದೇಶಗಳನ್ನು ಹರಿಬಿಟ್ಟಿದ್ದ.

ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್ ಮತ್ತು ರವಿಶಂಕರ್ (ಅ ಮತ್ತು ಸಂ) ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡ ತನಿಖೆ ಮುಂದುವರಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ