ಚಾಮರಾಜನಗರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

k venkatesh
15/08/2023

ಚಾಮರಾಜನಗರ: ಚಾಮರಾಜನಗರದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು.

ನಗರದ ಡಾ.‌ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಕೆ. ವೆಂಕಟೇಶ್ ಗೆ ತೆರೆದ ವಾಹನದಲ್ಲಿ ವಿವಿಧ ತುಕಡಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ವಿವಿಧ ಪೊಲೀಸ್ ತುಕಡಿಗಳಿಂದ ಸಚಿವರು ಗೌರವ ಸ್ವೀಕರಿಸಿದ್ರು.

ಶಾಸಕ ಪುಟ್ಟರಂಗಶೆಟ್ಟಿ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. ಇದೇ ವೇಳೆ ಆಕರ್ಷಕ ಪಥ ಸಂಚಲನ ನಡೆಯಿತು.

ಇತ್ತೀಚಿನ ಸುದ್ದಿ

Exit mobile version