ಕೊವಿಡ್ ನಿಂದ ಮೃತಪಟ್ಟವರ ಚಿತಾಭಸ್ಮ ಬಳಸಿಕೊಂಡು ಉದ್ಯಾನವನ ನಿರ್ಮಾಣ - Mahanayaka
11:07 AM Saturday 17 - January 2026

ಕೊವಿಡ್ ನಿಂದ ಮೃತಪಟ್ಟವರ ಚಿತಾಭಸ್ಮ ಬಳಸಿಕೊಂಡು ಉದ್ಯಾನವನ ನಿರ್ಮಾಣ

chithabhasma
05/07/2021

ಭೋಪಾಲ್: ಕೊರೊನಾ ಸೋಂಕಿಗೆ ಬಲಿಯಾದವರ ಚಿತಾಭಸ್ಮವನ್ನು ಬಳಕೆ ಮಾಡಿಕೊಂಡು, ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರಿಗೆ ಭೋಪಾಲ್ ನಲ್ಲಿ 12,000 ಚದರ ಅಡಿ ವಿಸ್ತೀರ್ಣದ ಉದ್ಯಾನವನವನ್ನು ನಿರ್ಮಿಸಲಾಗುತ್ತಿದೆ.

ಸ್ಮಶಾನದಲ್ಲಿ 21 ಟ್ರಕ್ ಲೋಡ್ ಚಿತಾಭಸ್ಮವಿದೆ. ಚಿತಾಭಸ್ಮವನ್ನು ನರ್ಮದಾ ನದಿಗೆ ಬಿಡುವುದು ಕಷ್ಟಕರ ಮತ್ತು ಪರಿಸರ ಸ್ನೇಹಿಯಲ್ಲ. ಹಾಗೆ ಮಾಡುವುದರಿಂದ ನದಿಯನ್ನು ಕಲುಷಿತಗೊಳಿಸಬಹುದು. ಆದ್ದರಿಂದ, ಪಾರ್ಕ್ ಅಭಿವೃದ್ಧಿಪಡಿಸುವುದಕ್ಕೆ ಚಿತಾಭಸ್ಮವನ್ನು ಬಳಸಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ” ನಿರ್ವಹಣಾ ಸಮಿತಿಯ ಕಾರ್ಯದರ್ಶಿ ಮಮತೇಶ್ ಶರ್ಮಾ ತಿಳಿಸಿದ್ದು,  ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಚಿತಾಭಸ್ಮವನ್ನು ಬಳಸಿ ಭೋಪಾಲ್‌ನ ಹಿಂದೂ ಸ್ಮಶಾನದಲ್ಲಿ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಭಾಭಾದಾ ವಿಶ್ರಮ್ ಘಾಟ್ ನಲ್ಲಿ 21 ಟ್ರಕ್ ಲೋಡ್ ಸತ್ತವರ ಚಿತಾಭಸ್ಮ ಬಳಸಿಕೊಳ್ಳಲಾಗುತ್ತದೆ. ಕೊರೊನಾದಿಂದ ಮೃತಪಟ್ಟವರ ಚಿತಾಭಸ್ಮವನ್ನು ಮೃತನ ಕುಟುಂಬಸ್ಥರು ಸಂಗ್ರಹಿಸಿಲ್ಲ. ಕಾರಣ ಕೊರೊನಾ ಪ್ರೇರಿತ ನಿರ್ಬಂಧಗಳು ಮತ್ತು ಅದರ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗಿಲ್ಲ.

ಮಾರ್ಚ್ 15ರಿಂದ ಜೂನ್ 15ರವರೆಗಿನ 90 ದಿನಗಳ ಅವಧಿಯಲ್ಲಿ ಕೊರೊನಾ ಪ್ರೋಟೋಕಾಲ್ ಅನ್ನು ಅನುಸರಿಸಿ ಭಡ್ಭಾದಾ ವಿಶ್ರಮ್ ಘಾಟ್‌ನಲ್ಲಿ 6,000 ಕ್ಕೂ ಹೆಚ್ಚು ಶವಗಳನ್ನು ದಹಿಸಲಾಗಿದೆ ಎಂದು ನಿರ್ವಹಣಾ ಸಮಿತಿಯ ಕಾರ್ಯದರ್ಶಿ ಮಮತೇಶ್ ಶರ್ಮಾ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ