ಭಾಷಣದ ವೇಳೆ ಊಟಕ್ಕೆ ಮುಗಿಬಿದ್ದ ಮಹಿಳಾ ಕಾರ್ಯಕರ್ತೆಯರು | ಬೇಸರ ವ್ಯಕ್ತಪಡಿಸಿದ ದೇವೇಗೌಡರು - Mahanayaka
10:09 AM Tuesday 14 - October 2025

ಭಾಷಣದ ವೇಳೆ ಊಟಕ್ಕೆ ಮುಗಿಬಿದ್ದ ಮಹಿಳಾ ಕಾರ್ಯಕರ್ತೆಯರು | ಬೇಸರ ವ್ಯಕ್ತಪಡಿಸಿದ ದೇವೇಗೌಡರು

devegowda
03/09/2021

ಬೆಂಗಳೂರು: ಜೆಡಿಎಸ್ ಮಹಿಳಾ ಸಮಾವೇಶದಲ್ಲಿ ನಾಯಕರ ಭಾಷಣದ ವೇಳೆಯಲ್ಲಿಯೇ ಮಹಿಳೆಯರು ಊಟಕ್ಕೆ ಮುಗಿಬಿದ್ದ ಘಟನೆ ನಡೆದಿದ್ದು, ಇತ್ತ ಭಾಷಣಕ್ಕೆ ನಿಂತ ದೇವೇಗೌಡರಿಗೆ ಖಾಲಿ ಕುರ್ಚಿಗಳ ದರ್ಶನವಾಗಿದೆ. ಇದರಿಂದಾಗಿ ದೇವೇಗೌಡರು ವೇದಿಕೆಯಲ್ಲಿಯೇ ಆಕ್ರೋಶ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ.


Provided by

ಮಳೆಯ ನಡುವೆಯೂ ಉತ್ಸಾಹ ಕಳೆದುಕೊಳ್ಳದ ದೇವೇಗೌಡರು,  ಭಾಷಣ ಆರಂಭಿಸಿದ್ದಾರೆ. ಈ ವೇಳೆ ಎಲ್ಲರೂ ಊಟಕ್ಕೆ ಮುಗಿಬಿದ್ದಿರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದ ಅವರು, ಊಟಕ್ಕಾಗಿ ಜಗಳವಾಡಲು ಬರುವವರನ್ನು ಸಮಾವೇಶಕ್ಕೆ ಕರೆತರಬಾರದು. ನೂರೈವತ್ತು ಜನ ಬಂದರೂ ಸಾಕು ಎಂದು ಹೇಳಿದರು.

ಇನ್ನೂ ಮುಂದಿನ ಚುನಾವಣೆ ಸಂಬಂಧ ಮಾತನಾಡಿದ ದೇವೇಗೌಡರು,  ನಾನು ಸುಮ್ಮನೆ ಕೂರುವುದಿಲ್ಲ.  ನಿರಂತರವಾಗಿ ಹೋರಾಟ ಮಾಡುತ್ತೇನೆ.  ನಾನು ಸಿಎಂ ಆಗಿದ್ದಾಗ ನೂರಾರು ಕೊಳೆಗೇರಿಗಳಿದ್ದವು. ಕೊಳೆಗೇರಿಗಳಿಗೆ ನಾನು ಭೇಟಿ ನೀಡುತ್ತಿದ್ದೆ. ಇದೂವರೆಗೆ ಯಾವ ಸಿಎಂ ಕೊಳೆಗೇರಿಗಳಿಗೆ ಭೇಟಿ ನೀಡಿದ್ದಾರೆ? ಎಂದು ಅವರು ಪ್ರಶ್ನಿಸಿದರು. ಜೊತೆಗೆ ಮುಂದಿನ ಚುನಾವಣೆಯಲ್ಲಿ ಬೆಂಗಳೂರಿನ ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕುತ್ತೇವೆ. ಕನಿಷ್ಠ 9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುತ್ತೇವೆ ಎಂದು ಘೋಷಿಸಿದರು.

ಇನ್ನಷ್ಟು ಸುದ್ದಿಗಳು…

ಭಾರತದ ಬಡ ಮುಸ್ಲಿಮರನ್ನು ತಾಲಿಬಾನಿಗಳು ಎನ್ನುವುದನ್ನು ನಿಲ್ಲಿಸಬೇಕು | ಓವೈಸಿ ಕಿಡಿ

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುವ ರಹಸ್ಯ ಸುರಂಗಮಾರ್ಗ ಪತ್ತೆ

ರಾತ್ರಿ 3 ಗಂಟೆಗೆ ಎದ್ದು ಎದೆಯನ್ನು ಒತ್ತಿ ಹಿಡಿದಂತಾಗುತ್ತಿದೆ ಎಂದು ಅಮ್ಮನಿಗೆ ಹೇಳಿದ್ದ ಸಿದ್ಧಾರ್ಥ್ ಶುಕ್ಲಾ

ಪಬ್ ನಲ್ಲಿ ಅಪ್ರಾಪ್ತ ಬಾಲಕಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್: ಪಬ್ ಮ್ಯಾನೇಜ್ ಮೆಂಟ್ ಗೆ ಸಂಕಷ್ಟ!

ಖಾಸಗಿ ವಾಹಿನಿ, ವೆಬ್ ಪೋರ್ಟಲ್, ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹರಡಲಾಗುತ್ತಿದೆ | ಸುಪ್ರೀಂ ಕೋರ್ಟ್ ಕಳವಳ

ಆತ್ಮಹತ್ಯೆ ಮಾಡಲು ನೀರಿಗೆ ಹಾರಿದ ಕುಡುಕನ ರಕ್ಷಣೆಗೆ ಹೋದ ಇಬ್ಬರು ಸಾವು | ಕುಡುಕ ಸೇಫ್!

ಇತ್ತೀಚಿನ ಸುದ್ದಿ