ಪೊಲೀಸ್ ದಂಡ ಹಾಕುತ್ತಾರೆಂಬ ಭಯದಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ | ಇಬ್ಬರು ಸಾವು - Mahanayaka
5:02 AM Saturday 18 - October 2025

ಪೊಲೀಸ್ ದಂಡ ಹಾಕುತ್ತಾರೆಂಬ ಭಯದಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ | ಇಬ್ಬರು ಸಾವು

tipaturu
29/10/2021

ತಿಪಟೂರು: ರಸ್ತೆ ಅಪಘಾತದಿಂದ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಹಿನ್ನವಳ್ಳಿ ಹೋಬಳಿಯ ಬಳುವನೇರಳು ಗೇಟ್ ನಲ್ಲಿ ನಡೆದಿದೆ.


Provided by

ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮಿತ್ತ  ಬಳುವನೇರಲು ಗ್ರಾಮದ ಕಡೆಯಿಂದ ತಿಪಟೂರಿಗೆ ಹೋಗುತ್ತಿದ್ದಾಗ ಗೇಟ್ ನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು (ಟಾಟಾ ಮಹೀಂದ್ರ )  ಗಾಡಿಯು ಒಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ಹೊನ್ನವಳ್ಳಿ  ಪೋಲಿಸ್ ಠಾಣೆಯ ಸಿಬ್ಬಂದಿಗಳು ಗೇಟ್ ನಲ್ಲಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ದಂಡ ಹಾಕುತ್ತಾರೆಂಬ ಭಯದಿಂದ ಅತಿವೇಗವಾಗಿ ಬಂದ ಕಾರು ಬೈಕ್ ಗೆ  ಗುದ್ದಿದ ಪರಿಣಾಮ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ತಿಳಿದ ಕೂಡಲೇ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರುಗಳು ಗೇಟ್ ನಲ್ಲಿ ಶವಗಳನ್ನಿರಿಸಿ, ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ಈ ಸಾವಿಗೆ ನೇರ ಪೊಲೀಸರೇ ಕಾರಣ ಎಂದು ಗ್ರಾಮಸ್ಥರು  ಆರೋಪಿಸಿದ್ದಾರೆ. ಸಂಬಂಧಪಟ್ಟವರನ್ನು ಕೂಡಲೇ ಕೆಲಸದಿಂದ ಅಮಾನತುಪಡಿಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಜಯಲಕ್ಷ್ಮಮ್ಮ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ                 ಘಟನೆ ನಡೆದ ಬಳುವನೇರಲು ಗೇಟ್ನಲ್ಲಿ ಪದೇಪದೇ ಇಂತಹ ಪ್ರಕರಣಗಳು ನಡೆಯುತ್ತಿದ್ದು,ಗೇಟ್ ನಲ್ಲಿ 4 ತಾಲ್ಲೂಕುಗಳ ರಸ್ತೆಗೆ  ಸಂಪರ್ಕಿಸಲಿದ್ದು,ಇಲ್ಲಿ ಯಾವುದೇ ರಸ್ತೆಗಳಿಗೆ ನಾಮಫಲಕಗಳಾಗಲಿ, ರಸ್ತೆ ವಿಭಜಕ ಗಳಾಗಲೀ ಮತ್ತು ರೋಡ್ ಹಂಪ್ ಇಲ್ಲದೇ ಇರುವುದು ದುರ್ಘಟನೆಗೆ ಕಾರಣವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ