ಮೃತ ಗುಬ್ಬಚ್ಚಿಗೆ ತಿಥಿ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ ಗ್ರಾಮಸ್ಥರು - Mahanayaka

ಮೃತ ಗುಬ್ಬಚ್ಚಿಗೆ ತಿಥಿ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ ಗ್ರಾಮಸ್ಥರು

gubbachchi
08/02/2022


Provided by

ಚಿಕ್ಕಬಳ್ಳಾಪುರ: ಜನರ ಜೊತೆ ಆತ್ಮೀಯವಾಗಿದ್ದ ಗುಬ್ಬಚ್ಚಿ ಮೃತಪಟ್ಟ ಹಿನ್ನೆಲೆ, ಪುಟ್ಟದಾದ ಸಮಾಧಿ ಕಟ್ಟಿ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜನರು ಪಕ್ಷಿಗಳನ್ನು ಹೆಚ್ಚು ಪ್ರೀತಿಸುತ್ತಾರೆ. ಅದರಲ್ಲೂ ಗುಬ್ಬಚ್ಚಿಗಳನ್ನು ಮನೆಯ ಕುಟುಂಬದ ಸದಸ್ಯರೆಂದು ಕಾಣುತ್ತಾರೆ. ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ತೆರಳುವ ಮುನ್ನ ಊರಿನ ಬಾಗಿಲಿನಲ್ಲಿ ಕೂತು ಗ್ರಾಮಸ್ಥರ ಮನ ಸೆಳೆಯುತ್ತಿದ್ದ ಈ ಗುಬ್ಬಚ್ಚಿ ಕೆಲ ದಿನಗಳ ಹಿಂದೆ ಇದ್ದಕ್ಕಿದಂತೆ ಕಾಣೆಯಾಗಿದ್ದು, ನಂತರ ಇದೇ ಗುಬ್ಬಚ್ಚಿ ಮರಣದ ಸುದ್ದಿ ಗ್ರಾಮಸ್ಥರ ನೋವಿಗೆ ಕಾಣವಾಗಿತ್ತು.

ಗ್ರಾಮಸ್ಥರು ಸೇರಿ ಗುಬ್ಬಚ್ಚಿಯ ಅಂತ್ಯಸಂಸ್ಕಾರ ಮಾಡಿದ್ದಾರೆ. ಸಮಾಧಿ ಕಟ್ಟಿದ್ದು 11ನೇ ದಿನದ ತಿಥಿ ಕಾರ್ಯದಲ್ಲಿ ಗ್ರಾಮದ ಮತ್ತು ಸುತ್ತಮುತ್ತಲಿನ ಜನಕ್ಕೂ ಊಟ ಹಾಕಿಸಿ ಪಕ್ಷಿ ಪ್ರೇಮ ಮೆರೆದಿದ್ದಾರೆ. ಅಲ್ಲದೆ, ಗ್ರಾಮದ ಹಲವೆಡೆ ಮತ್ತೆ ಹುಟ್ಟಿ ಬಾ ಗುಬ್ಬಚ್ಚಿ ಎಂದು ಬ್ಯಾನರ್ ಕಟ್ಟಿ, ಜೊತೆಗೆ ಪಕ್ಷಿಗಳನ್ನು ಸಂರಕ್ಷಿಸುವ ಅರಿವನ್ನು ಮೂಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಾರಿ ಹಿಮಪಾತ: 7 ಸೇನಾ ಸಿಬ್ಬಂದಿ ಹಿಮದಡಿ ಸಿಲುಕಿರುವ ಶಂಕೆ

ಕೇವಲ 900 ರೂ. ಆಸೆಗೆ ತಂದೆಯನ್ನೇ ಕೊಲೆ ಮಾಡಿದ ಪುತ್ರ

ತ್ರಿಪುರಾ ಬಿಜೆಪಿಗೆ ಇಬ್ಬರು ಶಾಸಕರು ರಾಜೀನಾಮೆ

ತಿಂಡಿ ತಿನ್ನಲು ಬಂದ ವಿದ್ಯಾರ್ಥಿ ಹೋಟೆಲ್​ ನಲ್ಲೇ ಹೃದಯಾಘಾತದಿಂದ ಸಾವು

ಶೈಕ್ಷಣಿಕ ಸಾಲ ಮನ್ನಾ, ಶಿರವಸ್ತ್ರ ಹೆಸರಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣ ನಿರಾಕರಣೆ ಖಂಡಿಸಿ : ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಹಿಜಾಬ್-ಕೇಸರಿ ಪೈಟ್ ನಡುವೆ ಎಂಟ್ರಿಯಾದ ನೀಲಿ: ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಇತ್ತೀಚಿನ ಸುದ್ದಿ