ನಿವಾರ್ ಚಂಡಮಾರುತಕ್ಕೆ ಐವರು ಬಲಿ, ನೂರಕ್ಕೂ ಅಧಿಕ ಜನರಿಗೆ ಗಾಯ - Mahanayaka
6:34 AM Saturday 21 - September 2024

ನಿವಾರ್ ಚಂಡಮಾರುತಕ್ಕೆ ಐವರು ಬಲಿ, ನೂರಕ್ಕೂ ಅಧಿಕ ಜನರಿಗೆ ಗಾಯ

26/11/2020

ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಗೆ ನಿವಾರ್ ಚಂಡಮಾರುತ ಅಪ್ಪಳಿಸಿದ್ದು, ಐದು ಮಂದಿ ಸಾವನ್ನಪ್ಪಿ, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ  ನಡೆದಿದ್ದು, ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಳೂರು, ಕಡಲೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಚೆನ್ನೈನಲ್ಲಿ 23 ಸೆಂ.ಮೀ.ನಷ್ಟು ಮಳೆಯಾಗಿರುವುದು ದಾಖಲಾಗಿದೆ. ಈ ನಡುವೆ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಎರಡು ದಿನ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ  . 13 ಲಕ್ಷ ಜನರಿಗೆ ಸುರಕ್ಷತೆ ಕಲ್ಪಿಸಬಲ್ಲ 4,733 ಪರಿಹಾರ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೆ 28 ಸಾವಿರ ಮಕ್ಕಳು ಸೇರಿ 1.38 ಲಕ್ಷ ಜನರನ್ನು ಈ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.


Provided by

ಮುನ್ನೆಚ್ಚರಿಕೆಯಾಗಿ ಚೆನ್ನೈ ಬಳಿ ಇರುವ ಚೇರಂಬರಂಬಾಕ್ಕಂ ಜಲಾಶಯದ ಗೇಟ್‍ ಗಳನ್ನು ತೆರೆದು ಅಡ್ಯಾರ್ ನದಿಗೆ ನೀರು ಹರಿಸಲಾಗಿದೆ. ಇದರಿಂದಾಗಿ ಆಡ್ಯಾರ್ ನದಿಯಲ್ಲಿ ಪ್ರವಾಹ ಸಾಧ್ಯತೆಯಿದ್ದು, ನದಿ ತೀರದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಕಳೆದ ಐದು ವರ್ಷಗಳಲ್ಲಿ ಈ ಜಲಾಶಯದ ಗೇಟ್ ತೆರೆದು ನೀರು ಹರಿಸಿರುವುದು ಇದೇ ಮೊದಲ ಬಾರಿಯಾಗಿದೆ.

ಇತ್ತೀಚಿನ ಸುದ್ದಿ