ಅನುಮಾನಾಸ್ಪದ ರೀತಿಯಲ್ಲಿ ವಕೀಲೆ ಆತ್ಮಹತ್ಯೆ - Mahanayaka
2:31 AM Thursday 15 - January 2026

ಅನುಮಾನಾಸ್ಪದ ರೀತಿಯಲ್ಲಿ ವಕೀಲೆ ಆತ್ಮಹತ್ಯೆ

death
12/03/2022

ಮೈಸೂರು: ಅನುಮಾನಾಸ್ಪದ ರೀತಿಯಲ್ಲಿ ವಕೀಲೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ರಾಮಕೃಷ್ಣ ನಗರದಲ್ಲಿ ನಡೆದಿದೆ.

ಚಂದ್ರಕಲಾ (32) ಆತ್ಮಹತ್ಯೆ ಮಾಡಿಕೊಂಡಿರುವ ವಕೀಲೆ. ಚಂದ್ರಕಲಾ ಅವರಿಗೆ ಪ್ರದೀಪ್‌ ನೊಂದಿಗೆ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ವರ್ಷದ ಮಗು ಇದೆ. ಆದರೆ, ಹಣದ ವಿಚಾರಕ್ಕೆ ಪತಿ-ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, ಕಳೆದ ತಿಂಗಳ ಹಿಂದೆ ಗಂಡ ಪ್ರದೀಪ್​ ರಿಂದ ಕೊಲೆಯತ್ನ ಆರೋಪ ಕೇಳಿಬಂದಿತ್ತು.

ಇದೀಗ ಚಂದ್ರಕಲಾ ಆತ್ಮಹತ್ಯೆಗೆ ಶರಣಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಗಂಡ, ಅತ್ತೆ, ಮಾವ ಸೇರಿ ಕೊಲೆ ಮಾಡಿದ್ದಾರೆಂದು ಚಂದ್ರಕಲಾ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಕುವೆಂಪುನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ: 60 ಗುಡಿಸಲು ಭಸ್ಮ, 7 ಮಂದಿ ಸಾವು

ಭೀಕರ ರಸ್ತೆ ಅಪಘಾತ: ಕಾರು ಚಾಲಕ ಸೇರಿ ಐದು ಮಂದಿ ಸ್ಥಳದಲ್ಲೇ ಸಾವು

ರಷ್ಯಾ ಸೇನೆಯಿಂದ ಉಕ್ರೇನ್‌ ಮೇಯರ್‌ ಕಿಡ್ನಾಪ್: ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ

ತಾಯಿ, ಮಗನನ್ನು ಒಂದಾಗಿಸಿದ ಆಧಾರ್ ಕಾರ್ಡ್

ಪಂಚರಾಜ್ಯ ಚುನಾವಣೆ: ಇವಿಎಂ ಹ್ಯಾಕ್ ಆಗಿರಬಹುದು; ಡಾ.ಜಿ.ಪರಮೇಶ್ವರ್

 

ಇತ್ತೀಚಿನ ಸುದ್ದಿ