ಡಿ.ಕೆ.ಶಿವಕುಮಾರ್‌ ಕೇವಲ ರಬ್ಬರ್‌ ಸ್ಟಾಂಪ್‌ ಅಧ್ಯಕ್ಷ: ಛಲವಾದಿ ನಾರಾಯಣಸ್ವಾಮಿ ಟೀಕೆ - Mahanayaka
11:53 AM Wednesday 20 - August 2025

ಡಿ.ಕೆ.ಶಿವಕುಮಾರ್‌ ಕೇವಲ ರಬ್ಬರ್‌ ಸ್ಟಾಂಪ್‌ ಅಧ್ಯಕ್ಷ: ಛಲವಾದಿ ನಾರಾಯಣಸ್ವಾಮಿ ಟೀಕೆ

clavadi narayana swamy
14/07/2022


Provided by

ಬೆಂಗಳೂರು: ಕಾಂಗ್ರೆಸ್‌ ವರಿಷ್ಠ ಹಾಗೂ ಸಂಸದ ರಾಹುಲ್‌ ಗಾಂಧಿ ಅವರು ‘ಸಿದ್ದರಾಮೋತ್ಸವ’ದಲ್ಲಿ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್‌ ಪಕ್ಷ ದುರ್ಬಲವಾಗಿರುವುದರ ಸಂಕೇತವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ  ಟೀಕಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಬ್ಬರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೇವಲ ರಬ್ಬರ್‌ ಸ್ಟಾಂಪ್‌ ಆಗಿ ಉಳಿದಿದ್ದಾರೆ. ಆ ಪಕ್ಷದ ಇತರ ನಾಯಕರು ಸಿದ್ದರಾಮಯ್ಯ ಅವರನ್ನು ಕಂಡರೆ ಹೆದರುತ್ತಾರೆ. ಅವರನ್ನು ವಿರೋಧಿಸಿದರೆ ತಮ್ಮ ಭವಿಷ್ಯ ಕಷ್ಟಕ್ಕೆ ಸಿಲುಕಬಹುದು ಎಂಬ ಆತಂಕಕ್ಕೆ ಸಿಲುಕಿದ್ದಾರೆ  ಎಂದು ಅವರು ಆರೋಪಿಸಿದರು.

ಸಿದ್ದರಾಮಯ್ಯ ಅವರದು ದೇವರಾಜ ಅರಸು ಅವರನ್ನು ಮೀರಿಸಿದ ನಾಯಕತ್ವ ಎಂದು ಶಾಸಕ ಜಿ.ಪರಮೇಶ್ವರ ಹೇಳಿದ್ದಾರೆ. ಇದು ಹಾಲು ಕುಡಿದು ಮೂತಿ ಸುಟ್ಟುಕೊಂಡ ಬೀರಬಲ್ಲನ ಬೆಕ್ಕಿನ ಕಥೆಯಂತಿದೆ. ಪರಮೇಶ್ವರ ಅವರೂ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಮೂತಿ ಸುಟ್ಟ ಬೆಕ್ಕಿನಂತೆ ಸಿದ್ದರಾಮಯ್ಯ ಅವರ ಮುಖಸ್ತುತಿಯಲ್ಲಿ ತೊಡಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮೋತ್ಸವಕ್ಕೆ ಪ್ರತಿಯಾಗಿ ಶಿವಕುಮಾರೋತ್ಸವ ಮಾಡುವುದಾಗಿ ಹೇಳುತ್ತಿದ್ದಾರೆ. ಇಂತಹ ಉತ್ಸವಗಳನ್ನು ನಡೆಸುವುದು ಬಿಡುವುದು ಕಾಂಗ್ರೆಸ್‌ನ ಆಂತರಿಕ ವಿಚಾರ. ಆದರೆ, ರಾಜಕೀಯ ಪಕ್ಷವಾಗಿ ಈ ನಾಯಕರು ಜನರಿಗೆ ಯಾವ ಸಂದೇಶ ನೀಡುತ್ತಿದ್ದಾರೆ ಎಂದೂ ನಾರಾಯಣಸ್ವಾಮಿ ಪ್ರಶ್ನಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ