ಹಿಜಾಬ್ ವಿವಾದ; ಆರಂಭಿಕ ಜಯ: ಕುಯಿಲಾಡಿ ಸುರೇಶ್ ನಾಯಕ್ - Mahanayaka
10:37 PM Wednesday 27 - August 2025

ಹಿಜಾಬ್ ವಿವಾದ; ಆರಂಭಿಕ ಜಯ: ಕುಯಿಲಾಡಿ ಸುರೇಶ್ ನಾಯಕ್

suresh nayak kuyilady
14/10/2022


Provided by

ಉಡುಪಿ: ಹಿಜಾಬ್ ವಿವಾದ‌ ಹಿನ್ನೆಲೆಯಲ್ಲಿ ಸುಪ್ರೀಂ‌ ಕೋರ್ಟಿನ‌ ದ್ವಿಸದಸ್ಯ ನ್ಯಾಯಪೀಠ ಒಮ್ಮತದ ತೀರ್ಪು ನೀಡದೇ, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದೆ.

ಈ ಮಧ್ಯೆ, ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿರುವುದು ಮುಂಬರುವ ತೀರ್ಪು ಸಕಾರಾತ್ಮಕವಾಗಿ ಬರಲಿದೆ ಎಂಬ ಸೂಚನೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಿಶ್ಲೇಷಿಸಿದ್ದಾರೆ.

ವಿವಾದದ ಅಂತಿಮ‌ ತೀರ್ಪು ಬರುವವರೆಗೆ ಈಗಾಗಲೇ  ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಲೇಬೇಕಾಗಿದೆ. ಸಂವಿಧಾನದಲ್ಲಿ ನಂಬಿಕೆ ಇರುವವರು ಮುಂಬರುವ ತೀರ್ಪನ್ನು ಗೌರವಿಸಬೇಕು ಎಂದು ಕುಯಿಲಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ