ಕಟ್ಟಡ ತೆರವುಗೊಳಿಸುವ ವೇಳೆ ಪಿಲ್ಲರ್ ಕುಸಿದು ಇಬ್ಬರು ಕಾರ್ಮಿಕರ ಸಾವು - Mahanayaka
8:34 PM Friday 11 - September 2026

ಕಟ್ಟಡ ತೆರವುಗೊಳಿಸುವ ವೇಳೆ ಪಿಲ್ಲರ್ ಕುಸಿದು ಇಬ್ಬರು ಕಾರ್ಮಿಕರ ಸಾವು

death
12/02/2023

ಬೆಂಗಳೂರು: ಕಟ್ಟಡ ಉರುಳಿಸುವಾಗ ಪಿಲ್ಲರ್ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ನ 10ನೇ ಕ್ರಾಸ್ ಬಳಿ ನಡೆದಿದೆ.

ಪಶ್ಚಿಮ ಬಂಗಾಳದ ಕೂಲಿ ಕಾರ್ಮಿಕರಾದ ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಮೃತ ದುರ್ದೈವಿಗಳು.

ರಾಜಾಜಿ ನಗರ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡವನ್ನು ಗುತ್ತಿಗೆದಾರ ಅಬು ಎಂಬುವವರು ತೆರವು ಮಾಡಿಸುತ್ತಿದ್ದರು. ಒಂದು ವಾರದಿಂದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸೂಕ್ತ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳದೇ ಕಟ್ಟಡ ತೆರವು ಮಾಡುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ 4 ಗಂಟೆಯ ಸುಮಾರಿಗೆ ಪಿಲ್ಲರ್ ಕುಸಿತು ಅವಘಡ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಸದ್ಯ ಮರಣೋತ್ತರ ಪರೀಕ್ಷೆಗೆ ಮೃತ ದೇಹಗಳನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler