ಉಮ್ರಾ ಯಾತ್ರೆಗೆ ತೆರಳಿದ್ದ ಇಬ್ಬರು ಮಹಿಳೆಯರು ಸಾವು
ಉಡುಪಿ: ಸೌದಿ ಅರೇಬಿಯಾದ ಮೆಕ್ಕಾಕ್ಕೆ ಉಮ್ರಾ ಯಾತ್ರೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಡೆದಿದೆ.
ಬ್ರಹ್ಮಾವರ ತಾಲೂಕಿನ ಮಧುವನ ಅಚ್ಲಾಡಿಯ ಮರಿಯಮ್ಮ(66) ಹಾಗೂ ಖತಿಜಮ್ಮ(68) ಮೃತ ದುದೈರ್ವಿಗಳು. ಇವರು ಮಂಗಳೂರಿನ ಏಜೆನ್ಸಿ ಮೂಲಕ ಇತರ 32 ಮಂದಿ ಜೊತೆಗೆ ಮಾ.1ರಂದು ಮಂಗಳೂರಿನಿಂದ ಮಕ್ಕಾಕ್ಕೆ ತೆರಳಿದ್ದರು.
ಉಮ್ರಾ ಮುಗಿಸಿ ಮದೀನಾಕ್ಕೆ ಹೋಗುವ ತಯಾರಿ ನಡೆಸುತ್ತಿದ್ದಾಗ ಮರಿಯಮ್ಮ ಮಾ.9ರಂದು ಭಾರತೀಯ ಕಾಲಮಾನ ಬೆಳಿಗ್ಗೆ 5 ಗಂಟೆಗೆ ಹೃದಯಾಘಾತದಿಂದ ಮೃತಪಟ್ಟರು.ಎರಡು ದಿನಗಳ ನಂತರ ಅಂದರೆ ಮಾ.11ರಂದು ಭಾರತದ ಕಾಲಮಾನ ಅಪರಾಹ್ನ 3 ಗಂಟೆಗೆ ಖತಿಜಮ್ಮ ಅನಾರೋಗ್ಯದಿಂದ ಮೃತಪಟ್ಟರು.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಇವರ ತಂಡದಲ್ಲಿ ಮೃತರು ಸೇರಿದಂತೆ ಕೋಟ ಮಧುವನ ಅಚ್ಲಾಡಿಯ 4 ಮಂದಿ ಮಹಿಳೆಯರಿದ್ದರು. ಮೃತರಿಬ್ಬರು ಸಂಬಂಧಿಗಳಾಗಿದ್ದು, ಇವರ ಅಂತ್ಯಕ್ರಿಯೆಯನ್ನು ಮಕ್ಕಾದಲ್ಲಿ ನೆರವೇರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























