ಮಣಿಪುರ ಬಿಸಿ: ಕೇಂದ್ರ ಸಚಿವರೊಂದಿಗೆ ಪ್ರಧಾನಿ ಮೋದಿ ಮಹತ್ವದ ತುರ್ತು ಸಭೆ; ಮೀಟಿಂಗ್ ನಲ್ಲಿ ಏನೇನ್ ಚರ್ಚೆ ಆಯಿತು..? - Mahanayaka
6:13 AM Saturday 12 - September 2026

ಮಣಿಪುರ ಬಿಸಿ: ಕೇಂದ್ರ ಸಚಿವರೊಂದಿಗೆ ಪ್ರಧಾನಿ ಮೋದಿ ಮಹತ್ವದ ತುರ್ತು ಸಭೆ; ಮೀಟಿಂಗ್ ನಲ್ಲಿ ಏನೇನ್ ಚರ್ಚೆ ಆಯಿತು..?

26/06/2023

ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಮುಗಿಸಿ ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಕ್ಯಾಬಿನೆಟ್ ಸಭೆ ನಡೆಯಿತು. ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಹರ್ದೀಪ್ ಸಿಂಗ್ ಪುರಿ ಮತ್ತು ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ಅಮಿತ್ ಶಾ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಣಿಪುರದ ಬೆಳವಣಿಗೆಗಳ ಬಗ್ಗೆ ವಿವರಣೆ ನೀಡಿದ್ದರು. ಭಾನುವಾರ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಣಿಪುರದ ಪರಿಸ್ಥಿತಿಯ ಬಗ್ಗೆ ಅಮಿತ್ ಶಾ ಅವರಿಗೆ ಮಾಹಿತಿ ನೀಡಿದ್ದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಿಂಸಾಚಾರವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಲು ಸಾಧ್ಯವಾಗಿದೆ ಎಂದು ಹೇಳಿದರು. ಮಣಿಪುರದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಅಮಿತ್ ಶಾ ಶನಿವಾರ ಸರ್ವಪಕ್ಷ ಸಭೆ ನಡೆಸಿದ್ದರು.

ಹಿಂಸಾಚಾರ ಪೀಡಿತ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ.ಸಂಗ್ಮಾ, ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಆರು ದಿನಗಳ ಕಾಲ ಅಮೆರಿಕ, ಈಜಿಪ್ಟ್ ಪ್ರವಾಸ ಪೂರ್ಣಗೊಳಿಸಿದ ನಂತರ ಸೋಮವಾರ ಮುಂಜಾನೆ ದೆಹಲಿಗೆ ಆಗಮಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler