ಮೂತ್ರ ವಿಸರ್ಜನೆ ಮಾಡಲಾಗಿದ್ದ ಸಂತ್ರಸ್ತನ ಪಾದ ಪೂಜೆ ಮಾಡಿ ಕ್ಷಮೆಯಾಚಿಸಿದ: ಮಧ್ಯಪ್ರದೇಶ ಸಿಎಂ - Mahanayaka
6:35 AM Tuesday 24 - February 2026

ಮೂತ್ರ ವಿಸರ್ಜನೆ ಮಾಡಲಾಗಿದ್ದ ಸಂತ್ರಸ್ತನ ಪಾದ ಪೂಜೆ ಮಾಡಿ ಕ್ಷಮೆಯಾಚಿಸಿದ: ಮಧ್ಯಪ್ರದೇಶ ಸಿಎಂ

madhyapradesh
06/07/2023

ಭೋಪಾಲ್: ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಜಾತಿ ಪೀಡಕನೋರ್ವ ಮೂತ್ರ ಮಾಡಿ ವಿಕೃತಿ ಮೆರೆದ ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಸಂತ್ರಸ್ತ ವ್ಯಕ್ತಿ ದಶಮತ್ ರಾವತ್ ಅವರನ್ನು ತಮ್ಮ ನಿವಾಸಕ್ಕೆ ಕರೆದು ಅವರ ಪಾದ ತೊಳೆದು ಕ್ಷಮೆಯಾಚಿಸಿದ್ದಾರೆ.

ವೈರಲ್ ಆಗಿದ್ದ ವಿಡಿಯೋದ ದೃಶ್ಯ ನೋಡಿ ತುಂಬಾ ನೋವಾಗಿತ್ತು. ಅದಕ್ಕಾಗಿ ನಾನು ನಿನ್ನ ಕ್ಷಮೆಯಾಚಿಸುತ್ತೇನೆ. ಜನರು ನನಗೆ ದೇವರಿದ್ದಂತೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇನ್ನೂ ಮೂತ್ರ ವಿಸರ್ಜನೆ ಮಾಡಿದ್ದ ಪಾಪಿಯನ್ನು ನಿನ್ನೆಯೇ ಬಂಧಿಸಲಾಗಿದೆ. ಈ ಘಟನೆ ಮೇಲ್ಜಾತಿಗಳು ಎಂಬ ಮನಸ್ಥಿತಿ ಹೊಂದಿರುವ ವ್ಯಕ್ತಿಗಳ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ