ಜೆಡಿಎಸ್ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು: ಸಿಎಂ ಸಿದ್ದರಾಮಯ್ಯ - Mahanayaka

ಜೆಡಿಎಸ್ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು: ಸಿಎಂ ಸಿದ್ದರಾಮಯ್ಯ

siddaramaiah
27/09/2023

ಚಾಮರಾಜನಗರ: ಜೆಡಿಎಸ್ ಇನ್ನುಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು.

ಹನೂರು ತಾಲೂಕಿನ ಕೋಣನಕೆರೆ ಗ್ರಾಮದ ಬುಡಕಟ್ಟು ಶಾಲೆಗೆ ಭೇಟಿಕೊಟ್ಟ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜಾತ್ಯಾತೀತ ಹೇಳಿಕೊಳ್ಳುವ  ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಜೆಡಿಎಸ್ , ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ನ್ನು ಏನೆಂದು ಕರೆಯಬೇಕು.  ಜೆಡಿಎಸ್ –  ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದರು.

2004 ರಲ್ಲಿ ಸಿದ್ದರಾಮಯ್ಯರವರು ಬಿಜೆಪಿಯ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದರೇ ಎಂಬ ಮಾಧ್ಯಮದವರ ಪ್ರಶ್ನೆಗೆ, ಅದ್ವಾನಿಯವರು ಹಿಂದೆ ಜನತಾ ಪಕ್ಷದಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ