ಚಂಡಮಾರುತ ಸಾಧ್ಯತೆ: ಪ್ರವಾಸಿಗರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

16/10/2023
ಉಡುಪಿ: ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ, ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿರುವುದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು ಮತ್ತು ಗಾಳಿಯ ವೇಗವು ಗಂಟೆಗೆ 40–45 ದಿಂದ 55 ಕಿ.ಮೀ ಇರುವುದರಿಂದ ಸಮುದ್ರವು ಪಕ್ಷಬ್ಬದತೆಯಿಂದ ಕೂಡಿರುತ್ತದೆ.
ಹಾಗಾಗಿ ಮುಂದಿನ 4 ದಿನಗಳ ಕಾಲ ಅಂದರೆ ಅ.20ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದರು.