ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಬಡಿದ ಸಿಡಿಲು: ಯುವಕನ ದಾರುಣ ಸಾವು - Mahanayaka
7:05 AM Tuesday 16 - December 2025

ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಬಡಿದ ಸಿಡಿಲು: ಯುವಕನ ದಾರುಣ ಸಾವು

pramod shetty
30/10/2023

ಕೋಟ: ಪೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.

ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ. ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ.

ಪ್ರಮೋದ್ ಬಡಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸೌಮ್ಯ ಸ್ವಭಾವದನಾಗಿದ್ದ ಇವರು ವಾಲಿಬಾಲ್ ಮುಂತಾದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ. ಇಬ್ಬರು ಸಹೋದರನ್ನು ಅಗಲಿದ್ದಾರೆ.

ರವಿವಾರ ಸಂಜೆ ವೇಳೆಗೆ ಮಳೆಯ ವಾತವಾರಣ ನಿರ್ಮಾಣವಾಗಿದ್ದು, ಯಾವುದೇ ಮುನ್ಸೂಚನೆ ಇಲ್ಲದೆ ಗುಡುಗು, ಸಿಡಿಲು ಆರ್ಭಟಿಸಿದೆ. ಈ ಸಂದರ್ಭ ಅಪಾಯದ ಮುನ್ಸೂಚನೆ ಅರಿಯದೆ ಪೋನ್ ನಲ್ಲಿ ಮಾತನಾಡುತ್ತಿದ್ದ ಪ್ರಮೋದ್ ಬಲಿಯಾಗಿದ್ದು ದುರ್ಘಟನೆಯಿಂದ ಸ್ಥಳೀಯರು ಗಾಬರಿಗೊಳಗಾಗಿದ್ದು, ಕುಟುಂಬದವರು ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಇತ್ತೀಚಿನ ಸುದ್ದಿ