ಕಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ಮೂವರ ದಾರುಣ ಸಾವು - Mahanayaka

ಕಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ಮೂವರ ದಾರುಣ ಸಾವು

kasaragodu
07/05/2024


Provided by

ಕಾಸರಗೋಡು: ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಬಳಿ ಆ್ಯಂಬುಲೆನ್ಸ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶ್ರೀನಾಥ, ಶರತ್ ಮೆನನ್ ಸೇರಿದಂತೆ ಮೂವರು ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಮೃತರು ಕೇರಳದ ತ್ರಿಶೂರು ಜಿಲ್ಲೆ ಗುರುವಾಯೂರು ನಿವಾಸಿಗಳಾಗಿದ್ದಾರೆ.

ಕಾಸರಗೋಡಿನಿಂದ ಮಂಗಳೂರಿಗೆ ಆ್ಯಂಬುಲೆನ್ಸ್ ನಲ್ಲಿ ರೋಗಿ ಕರೆದೊಯ್ಯಲಾಗುತ್ತಿತ್ತು. ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಆ್ಯಂಬುಲೆನ್ಸ್ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿಗೆ ಡಿಕ್ಕಿ ಹೊಡೆದು ರಸ್ತೆಯಲ್ಲೇ ಆ್ಯಂಬುಲೆನ್ಸ್ ಉರುಳಿಬಿದ್ದಿದೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ