ಕುವೈತ್ ಅಗ್ನಿ ದುರಂತ: ತನಗೆ ಹೋಗೋಕೇ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಕಿಡಿಕಾರಿದ ಕೇರಳ ಸಚಿವೆ - Mahanayaka

ಕುವೈತ್ ಅಗ್ನಿ ದುರಂತ: ತನಗೆ ಹೋಗೋಕೇ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಕಿಡಿಕಾರಿದ ಕೇರಳ ಸಚಿವೆ

14/06/2024


Provided by

ಕುವೈತ್‌ನಲ್ಲಿ ಸಂಭವಿಸಿರುವ ಭೀಕರ ಅಗ್ನಿ ದುರಂತದ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರಕಾರ ತನಗೆ ಅನುಮತಿ ನಿರಾಕರಿಸಿದೆ ಎಂದು ಕೇರಳ ಸಚಿವೆ ವೀಣಾ ಜಾರ್ಜ್ ಆರೋಪಿಸಿದ್ದಾರೆ. ಬುಧವಾರ ಕುವೈತ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದು, ಈ ಪೈಕಿ 45 ಮಂದಿ ಭಾರತೀಯರಾಗಿದ್ದಾರೆ.

ಕೊಲ್ಲಿ ರಾಷ್ಟ್ರವಾದ ಕುವೈತ್‌ನಲ್ಲಿ ಸಂಭವಿಸಿರುವ ಭೀಕರ ಅಗ್ನಿ ದುರಂತದ ಪರಿಹಾರ ಕಾರ್ಯಾಚರಣೆಯಲ್ಲಿ ಸಮನ್ವಯ ಸಾಧಿಸಲು ಕುವೈತ್‌ಗೆ ಭೇಟಿ ನೀಡಲು ಬಯಸಿದ್ದ ನನಗೆ ಅನುಮತಿ ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

” ಕುವೈತ್‌ಗೆ ಭೇಟಿ ನೀಡಿ, ಈ ದುರಂತದಲ್ಲಿ ಸಂತ್ರಸ್ತರಾಗಿರುವ ನಮ್ಮ ಜನರ ನೆರವಿಗೆ ನಿಂತು, ಪರಿಹಾರ ಕಾರ್ಯಾಚರಣೆಯಲ್ಲಿ ಸಮನ್ವಯ ಸಾಧಿಸಲಷ್ಟೆ ನಾವು ಕೇಂದ್ರ ಸರಕಾರದ ಅನುಮತಿ ಕೋರಿದ್ದೆವು. ಆದರೆ, ಈ ಅನುಮತಿಯನ್ನು ನಿರಾಕರಿಸಲಾಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ