ರಾಸಲೀಲೆ ವಿಷಯ ಇಡೀ ದೇಶಕ್ಕೆ ಗೊತ್ತಾಗಿದೆ | ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಪಡೆಯಿರಿ | ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ - Mahanayaka
4:23 PM Thursday 10 - September 2026

ರಾಸಲೀಲೆ ವಿಷಯ ಇಡೀ ದೇಶಕ್ಕೆ ಗೊತ್ತಾಗಿದೆ | ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಪಡೆಯಿರಿ | ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

03/03/2021

ಬೆಂಗಳೂರು: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಪಡೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಆಯೋಜಿಸಿರುವ ಜನ-ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಗೂ ಮೊದಲು ಈ ಬಗ್ಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ರಾಜೀನಾಮೆ ತಕ್ಷಣ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಇಡೀ ದೇಶಕ್ಕೆ ರಮೇಶ್ ರಾಸಲೀಲೆ ಗೊತ್ತಾಗಿದೆ. ಹೀಗಾಗಿ ತಕ್ಷಣ ಪ್ರಕರಣದ ಕುರಿತು ಎಫ್‌ಐಆರ್ ದಾಖಲಾಗಬೇಕು. ಸೂಕ್ತ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

whatsapp

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti