ಮೂಡಿಗೆರೆ: ಬಾಳೂರು ಮೀಸಲು ಅರಣ್ಯದಲ್ಲಿ ಮೋಟಾರ್ ರೇಸ್: ಗಾಢ ನಿದ್ದೆಯಲ್ಲಿ ಅರಣ್ಯ ಇಲಾಖೆ - Mahanayaka
12:57 AM Saturday 23 - August 2025

ಮೂಡಿಗೆರೆ: ಬಾಳೂರು ಮೀಸಲು ಅರಣ್ಯದಲ್ಲಿ ಮೋಟಾರ್ ರೇಸ್: ಗಾಢ ನಿದ್ದೆಯಲ್ಲಿ ಅರಣ್ಯ ಇಲಾಖೆ

chikkamagaluru
01/09/2024


Provided by

ಕೊಟ್ಟಿಗೆಹಾರ: ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಬೈರಾಪುರ ಹೊಸಕೆರೆ 9 ಗುಡ್ಡ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಜೀಪ್ ಗಳಲ್ಲಿ ರಾಲಿ ನಡೆದಿದ್ದು, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ, ಮೂಡಿಗೆರೆ ವಲಯದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಎತ್ತಿನಭುಜ ದಟ್ಟಾರಣ್ಯ ರಸ್ತೆಯಲ್ಲಿ ಫೋರ್ ವೀಲ್ ಡ್ರೈವ್ ಮೋಟಾರು ರಾಲಿ ನಡೆಯುತ್ತಿದೆ.

ನೂರಕ್ಕೂ ಹೆಚ್ಚು ವಾಹನಳು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೋಗುತ್ತಿವೆ. ಅರಣ್ಯ ಇಲಾಖೆಯ ಅನುಮತಿ ಇಲ್ಲದೆ, ಗುಪ್ತವಾಗಿ ರ್‍ಯಾಲಿ ಆಯೋಜಿಸಲಾಗಿದೆ. ಈ ಕುರಿತು ಮೂಡಿಗೆರೆ ವಲಯ ಅರಣ್ಯಾಧಿಕಾರಿಯಾಗಲೀ ಅಥವಾ ತಳಮಟ್ಟದ ಸಿಬ್ಬಂದಿಗಳಾಗಲೀ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಅರಣ್ಯ ಸಿಬ್ಬಂದಿಗಳ ದಿವ್ಯ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪದಿಂದಾಗಿ,  ಸಕಲೇಶಪುರ, ಚಿಕ್ಕಮಗಳೂರು, ಮೂಡಿಗೆರೆ ತಾಲ್ಲೂಕಿನ ಜನರು ಮೋಜಿನ ಕ್ರೀಡೆಯಲ್ಲಿ ಭಾಗಿಯಾಗುವುದರ ಮೂಲಕ ಅರಣ್ಯ ಕಾನೂನುಗಳನ್ನು ಗಾಳಿಗೆ ತೂರುತ್ತಿದ್ದಾರೆ. ಅತೀವೇಗದ ವಾಹನಗಳ ಸದ್ದು ವನ್ಯಜೀವಿಗಳಿಗೆ ಕಂಟಕವಾಗಲಿದೆ.  ಈ ಭಾಗವು ಆನೆ ಕಾರಿಡಾರ್ ಆಗಿದ್ದು, ಆನೆಗಳು ಅಕ್ಕಪಕ್ಕದ ಹಳ್ಳಿಗಳಿಗೆ ನುಗ್ಗುವ ಸಾಧ್ಯತೆ ಇದೆ. ಅಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ತನಗೂ ಇದಕ್ಕೂ ಸಂಬಂಧವೇ ಇಲ್ಲದಂತಿದ್ದಾರೆ. ತುರ್ತಾಗಿ ವಾಹನಗಳನ್ನು ಜಪ್ತು ಮಾಡಿ, ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದವರ ಮೇಲೆ ಕಠಿಣ ಕ್ರಮ ಜರುಗಿಸಲು ಪರಿಸರ ಪ್ರೇಮಿಗಳು ಸಾರ್ವಜನಿಕರು ಒತ್ತಾಯ ಮಾಡುತ್ತಿದ್ದಾರೆ.

ಉಳ್ಳವರ ಮಕ್ಕಳ ಮೋಜಿನಟಕ್ಕೆ ಕಾಡುಪ್ರಾಣಿಗಳ ಆವಾಸಸ್ಥಾನಕ್ಕೆ ಧಕ್ಕೆ:

ಪ್ರಭಾವಿ ರಾಜಕಾರಣಿ ಮಗ ರಾಲಿಯಲ್ಲಿ ಭಾಗಿಯಾಗಿದ್ದು, ಬಾಳೂರು ಮೀಸಲಾ ಅರಣ್ಯದ ಬೈರಾಪುರ ಎತ್ತಿನಬುಜ 9 ಗುಡ್ಡ ಮೊದಲಾದ ಸ್ಥಳಗಳಲ್ಲಿ ಶ್ರೀಮಂತರ ಮಕ್ಕಳು ಹಾಗೂ ರಾಜಕಾರಣಿಗಳ ಮಕ್ಕಳು ಜೀಪ್ ರ್ಯಾಲಿ ನಡೆಸಿದ್ದಾರೆ. ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಜೀಪ್ ರಾಲಿಯಲ್ಲಿ ಪ್ರಭಾವಿ ರಾಜಕಾರಣಿಯ ಮಗ ಭಾಗವಹಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಭಾಗದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ವಾಹನಗಳ ಕರ್ಕಶಬ್ದದಿಂದ ಊರಿಗೆ ಬರುವ ಸಂಭವವಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ

ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿದ ಜೀಪ್ ಮಾಲೀಕರು:

ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ರ್ಯಾಲಿಗೆ ಬಂದ 80ಕ್ಕೂ ಹೆಚ್ಚು ಜೀಪ್ ಗಳು ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿದ್ದು ಕಂಡು ಬಂತು ವಾಹನದ ಮೂಲ ಸ್ವರೂಪವನ್ನು ಬದಲಾಯಿಸಬಾರದೆಂಬ ನಿಯಮವಿದ್ದರೂ ಜೀಪ್ ಮಾಲೀಕರು ಮೂಲ ಸ್ವರೂಪವನ್ನು ಬದಲಾಯಿಸಿ ರ್ಯಾಲಿಗೆ ಭಾಗವಹಿಸಿದ್ದು ಕಂಡು ಬಂತು ಕರ್ಕಶ ಶಬ್ದದೊಂದಿಗೆ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ವಾಹನಗಳು ಓಡಾಡಿದ್ದರಿಂದ ಪ್ರಾಣಿಗಳು ದಿಕ್ಕಾಪಾಲಾಗಿ ಓಡಿ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ