ಪೊಲೀಸರಿಂದ ಗಂಭೀರ ಹಲ್ಲೆ ಆರೋಪ: ಸಂತ್ರಸ್ತನನ್ನು ಆಸ್ಪತ್ರೆಗೆ ದಾಖಲಿಸಿ ಎಂದ ಕೋರ್ಟ್ - Mahanayaka
2:07 AM Thursday 16 - October 2025

ಪೊಲೀಸರಿಂದ ಗಂಭೀರ ಹಲ್ಲೆ ಆರೋಪ: ಸಂತ್ರಸ್ತನನ್ನು ಆಸ್ಪತ್ರೆಗೆ ದಾಖಲಿಸಿ ಎಂದ ಕೋರ್ಟ್

07/11/2024

ಬಂಧನದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಿಂದ ಕ್ರೂರ ಹಲ್ಲೆಗೆ ಒಳಗಾದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸುವಂತೆ ಬಾಂಬೆ ಹೈಕೋರ್ಟ್ ಬುಧವಾರ ಆದೇಶಿಸಿದೆ. ಹೈಕೋರ್ಟ್ ನಲ್ಲಿ ವೈದ್ಯಕೀಯ ಅಧಿಕಾರಿಯ ವರದಿಯನ್ನು ಉಲ್ಲೇಖಿಸಿದ ನ್ಯಾಯಪೀಠ, ಅವರ ಆರೋಗ್ಯವನ್ನು ನಿರ್ಣಯಿಸಲು ಮತ್ತಷ್ಟು, ವಿವರವಾದ ಪರೀಕ್ಷೆಗೆ ನಿರ್ದೇಶಿಸಿದೆ.


Provided by

ಆರೋಪಿ ಅನಿಲ್ ರಾಥೋಡ್ ನನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ ನವೆಂಬರ್ 5 ರಂದು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಒಂದು ದಿನದ ನಂತರ ಈ ಆದೇಶ ಬಂದಿದೆ. ರಾಥೋಡ್ ಅವರ ವಕೀಲರ ಪ್ರಕಾರ, ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಬೆಲ್ಟ್ ನಿಂದ ಹಲ್ಲೆ ನಡೆಸಿದ್ದಾರೆ. ಅವರ ಬೆನ್ನಿಗೆ ತೀವ್ರ ಗಾಯವಾಗಿದೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ರಾಥೋಡ್ ಅವರನ್ನು ವೈಯಕ್ತಿಕವಾಗಿ ಪರೀಕ್ಷಿಸುವಂತೆ ವಕೀಲೆ ಪ್ರಿಯಾಂಕಾ ದುಬೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಅವರನ್ನು ಬಂಧಿಸಿದ 24 ಗಂಟೆಗಳ ಒಳಗೆ ಪೊಲೀಸರು ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಮತ್ತು ವೈದ್ಯರ ವರದಿಯು ಹಲ್ಲೆಯ ಗಾಯಗಳ ಯಾವುದೇ ಚಿಹ್ನೆಗಳನ್ನು ಸೂಚಿಸಿಲ್ಲ ಎಂದು ನ್ಯಾಯಾಲಯ ಗಮನಿಸಿದೆ ಎಂದರು.

ಅದೇ ದಿನ ರಾಥೋಡ್ ಅವರ ಸಹೋದರ ಸುನಿಲ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ನವೆಂಬರ್ 4 ರಂದು ಪೊಲೀಸರು ರಾಥೋಡ್ ಅವರನ್ನು ವಶಕ್ಕೆ ತೆಗೆದುಕೊಂಡು ಹಲ್ಲೆ ನಡೆಸಿದ್ದರು ಎಂದು ಅವರ ವಕೀಲರಾದ ನಿಮಯ್ ದವೆ ಮತ್ತು ಮೇಘಾ ಗುಪ್ತಾ ಹೇಳಿದ್ದಾರೆ. ಇದರ ನಂತರ ರಾಥೋಡ್ ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾರೆ ಎಂದು ವರದಿಯಾಗಿದೆ, ಆದರೆ ಪೊಲೀಸರು ಅದೇ ದಿನದ ನಂತರ ಅವರನ್ನು ಮತ್ತೆ ಬಂಧಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ