ಉತ್ತರಪ್ರದೇಶದಲ್ಲಿ ಕಾರಿಗೆ ಬಸ್ ಡಿಕ್ಕಿ: 5 ಮಂದಿ ಸಾವು - Mahanayaka

ಉತ್ತರಪ್ರದೇಶದಲ್ಲಿ ಕಾರಿಗೆ ಬಸ್ ಡಿಕ್ಕಿ: 5 ಮಂದಿ ಸಾವು

25/11/2024


Provided by

ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಕತ್ರಾ-ಬಿಲ್ಹೌರ್ ಹೆದ್ದಾರಿಯಲ್ಲಿ ಬೊಲೆರೊ ಕಾರು ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಬೊಲೆರೊದಲ್ಲಿದ್ದ ಜನರು ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಲ್ಲದೇ ಕೂಡಲೇ ಸ್ಥಳಕ್ಕೆ ತಲುಪಲು ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ