ಸರಣಿ ಅಪಘಾತ: ಮೂವರು ಪ್ರಯಾಣಿಕರ ದಾರುಣ ಸಾವು - Mahanayaka
1:04 PM Wednesday 15 - October 2025

ಸರಣಿ ಅಪಘಾತ: ಮೂವರು ಪ್ರಯಾಣಿಕರ ದಾರುಣ ಸಾವು

jamakhandi
01/02/2025

ಬಾಗಲಕೋಟೆ: ಟಾಟಾ ಏಸ್, ಕಾರು ಹಾಗೂ ಎರಡು ಬೈಕ್ ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ  ಮೂವರು ಸಾವಿಗೀಡಾದ ದಾರುಣ ಘಟನೆ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ನಡೆದಿದೆ.


Provided by

ಟಾಟಾ ಏಸ್ ಕಾರು ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿತ್ತು. ವಿಜಯಪುರದಿಂದ ಜಮಖಂಡಿಗೆ ಕಾರು ಬರುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ನ ಹಿಂಬದಿಯಿಂದ ಬರುತ್ತಿದ್ದ ಎರಡು ಬೈಕ್ ಗಳು ಕೂಡ ಅಪಘಾತಕ್ಕೀಡಾಗಿವೆ.

ಅಪಘಾತದಲ್ಲಿ ಟಾಟಾ ಏಸ್, ಕಾರು ಹಾಗೂ ಬೈಕ್ ನಲ್ಲಿದ್ದ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ. ಮೃತರ ವಿವರಗಳು ಇನ್ನೂ ಲಭ್ಯವಾಗಿಲ್ಲ. ಗುರುತುಪತ್ತೆ ಕಾರ್ಯ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್ ಐ ಗಂಗಾಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ