ವಿಮಾನ ಮಾರ್ಗ ತೆರವು ವಿಳಂಬ: ಹೈಕೋರ್ಟ್ ಕ್ಷಮೆಯಾಚಿಸಿದ ಅಧಿಕಾರಿ - Mahanayaka

ವಿಮಾನ ಮಾರ್ಗ ತೆರವು ವಿಳಂಬ: ಹೈಕೋರ್ಟ್ ಕ್ಷಮೆಯಾಚಿಸಿದ ಅಧಿಕಾರಿ

11/02/2025

ಮುಂಬೈ ಉಪನಗರ ಕಲೆಕ್ಟರ್ ಸೋಮವಾರ ಬಾಂಬೆ ಹೈಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವ ಮತ್ತು ಟೇಕ್ ಆಫ್ ಮಾಡುವ ಹಾರಾಟದ ಹಾದಿಯಲ್ಲಿನ ಅಡೆತಡೆಗಳನ್ನು ಸಂಪೂರ್ಣವಾಗಿ ತೆಗೆದುಹಾಕದಿದ್ದಕ್ಕಾಗಿ ಬೇಷರತ್ತಾಗಿ ಕ್ಷಮೆಯಾಚಿಸಿದ್ದಾರೆ.


Provided by

ನ್ಯಾಯಾಲಯದ ನಿರ್ದೇಶನಗಳನ್ನು ಅನುಸರಿಸುತ್ತೇವೆ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ.
“ಕಟ್ಟಡಗಳ ವಿರುದ್ಧ ಶೇಕಡಾ 100 ರಷ್ಟು ತೆಗೆದುಹಾಕುವ ಕ್ರಮವನ್ನು ಪೂರ್ಣಗೊಳಿಸದಿದ್ದಕ್ಕಾಗಿ ನಾನು ಅತ್ಯಂತ ಗೌರವಯುತವಾಗಿ ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ.
ಆದರೆ ಅಡೆತಡೆಗಳನ್ನು ತೆಗೆದುಹಾಕುವಲ್ಲಿ ಗಣನೀಯ ಪ್ರಗತಿ ಸಾಧಿಸಲಾಗಿದೆ” ಎಂದು ಕಲೆಕ್ಟರ್ ಹೇಳಿದ್ದಾರೆ. ಮುಂಬೈ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (ಎಂಐಎಎಲ್) ಪ್ರತಿ ಹಂತದಲ್ಲೂ ಬೆಳವಣಿಗೆಗಳ ಬಗ್ಗೆ ಮೌಲ್ಯಮಾಪನ ಮಾಡುತ್ತದೆ ಮತ್ತು ಸಂಪೂರ್ಣ ಕ್ರಮವನ್ನು ಸಾಧ್ಯವಾದಷ್ಟು ತ್ವರಿತವಾಗಿ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಭಾರತಿ ಡಾಂಗ್ರೆ ನೇತೃತ್ವದ ನ್ಯಾಯಪೀಠದ ಮುಂದೆ ಅಫಿಡವಿಟ್ ಸಲ್ಲಿಸಲಾಗಿದೆ. ವಿಮಾನ ನಿಲ್ದಾಣದ ಬಳಿ ಬಹುಮಹಡಿ ಕಟ್ಟಡಗಳು ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನದ ಹಾರಾಟದ ಮಾರ್ಗಕ್ಕೆ ಅಡ್ಡಿಯಾಗುತ್ತವೆ ಎಂದು ಕಳವಳ ವ್ಯಕ್ತಪಡಿಸಿ ಸಾಮಾಜಿಕ ಕಾರ್ಯಕರ್ತ ಯಶವಂತ್ ಶೆಣೈ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ