ಶಾಲೆಯಲ್ಲಿ 16 ವರ್ಷದ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ತನಿಖೆಗೆ ಶಿಕ್ಷಣ ಸಚಿವರ ಆದೇಶ - Mahanayaka

ಶಾಲೆಯಲ್ಲಿ 16 ವರ್ಷದ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ತನಿಖೆಗೆ ಶಿಕ್ಷಣ ಸಚಿವರ ಆದೇಶ

15/02/2025


Provided by

ಕೇರಳ ರಾಜ್ಯದ ತಿರುವನಂತಪುರಂ ಜಿಲ್ಲೆಯಲ್ಲಿ ಪ್ಲಸ್ ಒನ್ ವಿದ್ಯಾರ್ಥಿಯ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕೇರಳದ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಸಾರ್ವಜನಿಕ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಅವರ ಸೂಚನೆಯ ಮೇರೆಗೆ ವೊಕೇಶನಲ್ ಹೈಯರ್ ಸೆಕೆಂಡರಿ ವಿಭಾಗದ ಉಪ ನಿರ್ದೇಶಕರು (ಪಠ್ಯಕ್ರಮ) ರಾಜ್ಯ ರಾಜಧಾನಿಯ ಕಟ್ಟಕಡ ಪ್ರದೇಶದ ಶಾಲೆಯೊಳಗೆ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯನ್ನು ಪರಿಶೀಲಿಸಲಿದ್ದಾರೆ.

ಶುಕ್ರವಾರ ಬೆಳಿಗ್ಗೆ, ರಾಜಧಾನಿ ಜಿಲ್ಲೆಯ ಎರುಮಕುಳಿ ಪ್ರದೇಶದ ನಿವಾಸಿ 16 ವರ್ಷದ ಬೆನ್ಸನ್ ಅಬ್ರಹಾಂ ತನ್ನ ಶಾಲಾ ಕಟ್ಟಡದ ಮೆಟ್ಟಿಲುಗಳ ಬಳಿ ಛಾವಣಿಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಮೃತ ವಿದ್ಯಾರ್ಥಿ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ.

ಇತ್ತೀಚಿನ ಕೆಲವು ವಾರಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡ ರ್ಯಾಗಿಂಗ್ ಮತ್ತು ಆತ್ಮಹತ್ಯೆಯ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಜನವರಿಯಲ್ಲಿ, 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಘಟನೆ ಬೆನ್ನಲ್ಲೇ ಈ ಘಟನೆ ನಡೆದಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ