ಚಿಕ್ಕಮಗಳೂರು: ಕಾಫಿನಾಡಲ್ಲಿ ಟೀಮ್ ಇಂಡಿಯಾಗೆ ಆಲ್ ದಿ ಬೆಸ್ಟ್ ಎಂದ 1500 ಪೊಲೀಸರು - Mahanayaka

ಚಿಕ್ಕಮಗಳೂರು: ಕಾಫಿನಾಡಲ್ಲಿ ಟೀಮ್ ಇಂಡಿಯಾಗೆ ಆಲ್ ದಿ ಬೆಸ್ಟ್ ಎಂದ 1500 ಪೊಲೀಸರು

cricket
09/03/2025


Provided by

ಚಿಕ್ಕಮಗಳೂರು: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯವು ಇಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಚಾಂಪಿಯನ್ಸ್ ಪಟ್ಟಕ್ಕೆ ಕಾದಾಟ ನಡೆಯಲಿದೆ.

ಟೀಮ್ ಇಂಡಿಯಾ ಗೆದ್ದು ಬರುವಂತೆ ಅಭಿಮಾನಿಗಳು ಶುಭ ಹಾರೈಸುತಿದ್ದಾರೆ. ಆದರೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ 1500ಕ್ಕೂ ಹೆಚ್ಚು ಪೊಲೀಸರು ಟೀಮ್ ಇಂಡಿಯಕ್ಕೆ ಶುಭಕೋರಿದ್ದಾರೆ.

ಫಿಟ್ನೆಸ್ ಫಾರ್ ಆಲ್ ಕಾರ್ಯಕ್ರಮದಲ್ಲಿ ಇಂದು ಮುಂಜಾನೆ ಭಾಗಿಯಾಗಿದ್ದ 1500 ಪೊಲೀಸರು ಎಸ್ಪಿ ವಿಕ್ರಮ್ ಅಮಟೆ ನೇತೃತ್ವದಲ್ಲಿ ಟೀಮ್ ಇಂಡಿಯಕ್ಕೆ ಆಲ್ ದಿ ಬೆಸ್ಟ್ ಗೆದ್ದು ಬಾ ಇಂಡಿಯಾ ಎಂದು ಶುಭಕೋರಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ