ಪ್ರತ್ಯೇಕ ಪ್ರಕರಣ: ಸರ್ಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು, ಕಾರು ಚಾಲಕನಿಗೆ ಗಂಭೀರ ಗಾಯ - Mahanayaka

ಪ್ರತ್ಯೇಕ ಪ್ರಕರಣ: ಸರ್ಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು, ಕಾರು ಚಾಲಕನಿಗೆ ಗಂಭೀರ ಗಾಯ

chikkamagaluru
14/06/2025


Provided by

ಚಿಕ್ಕಮಗಳೂರು: ಕಾಫಿನಾಡಲ್ಲಿ 2 ಸರ್ಕಾರಿ ಬಸ್ಸುಗಳ ಪ್ರತ್ಯೇಕ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಬೈಕ್ ಸವಾರ ಸಾವು:

ಕಡೂರು ಎಪಿಎಂಸಿಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಡೂರು ಪಟ್ಟಣ, ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ನಡೆದಿದೆ. ಮೃತಪಟ್ಟ ಹುಸೇನ್ (23) ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಕಾರು, ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ:

ಕೊಪ್ಪ ತಾಲೂಕಿನಿಂದ ತರೀಕೆರೆ ಹೋಗುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಾರಿಗೆ ಡಿಕ್ಕಿಯೊಡೆದ ಪರಿಣಾಮ  ಬಸ್ ನ ಮೇಲೆಯೇ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಲೈನ್ ಫ್ಯೂಸ್ ಕಟ್ ಆಗಿದ್ದರಿಂದಾಗಿ ಭಾರೀ ಅನಾಹುತ ತಪ್ಪಿದೆ.  ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಡ ಗಾಯಗಳಾಗಿದ್ದು, ಗಾಯಾಳುಗಳನ್ನು  ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಚಿಕ್ಕಮಗಳೂರು ಜಿಲ್ಲೆಯ ಕಡೂರು–ಕೊಪ್ಪ ತಾಲೂಕಿನಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ