11 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಏರಿಕೆಯಾಗಲಿದೆ: ಯಾವೆಲ್ಲ ಜಿಲ್ಲೆಗಳು ಇಲ್ಲಿದೆ ವಿವರ - Mahanayaka

11 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಏರಿಕೆಯಾಗಲಿದೆ: ಯಾವೆಲ್ಲ ಜಿಲ್ಲೆಗಳು ಇಲ್ಲಿದೆ ವಿವರ

haevy rain
23/06/2025

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಆದರೂ ಜೂನ್ 26ರ ನಂತರ ಮಳೆ ಹೆಚ್ಚುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ, ಗದಗ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಭಾನುವಾರ ಶೃಂಗೇರಿ, ಕಳಸ, ಭಾಗಮಂಡಲ, ಗುಬ್ಬಿ, ಕಮ್ಮರಡಿ, ಮಾಣಿ, ಉಪ್ಪಿನಂಗಡಿ, ಮಂಗಳೂರು, ಯಲ್ಲಾಪುರ, ಗೇರುಸೊಪ್ಪ, ಸುಳ್ಯ, ಪುತ್ತೂರು, ಮಂಕಿ, ಬಂಟವಾಳ, ಕುಂದಾಪುರ, ಕ್ಯಾಸಲ್​​ರಾಕ್, ಸಿದ್ದಾಪುರ, ಮೂಡುಬಿದಿರೆ, ಕೊಪ್ಪ, ಜೋಯ್ಡಾ ಹಾಗೂ ಅಂಕೋಲಾದಲ್ಲಿ ಹೆಚ್ಚಿನ ಮಳೆಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ