ಡಿ.ಕೆ.ಶಿವಕುಮಾರ್ RSS ಗೀತೆನೂ ಹಾಡಬಹುದು, ಆದ್ರೆ ನಾವು ಏನೂ ಮಾತನಾಡಬಾರದು: ಕೆ.ಎನ್.ರಾಜಣ್ಣ ಕಿಡಿ - Mahanayaka

ಡಿ.ಕೆ.ಶಿವಕುಮಾರ್ RSS ಗೀತೆನೂ ಹಾಡಬಹುದು, ಆದ್ರೆ ನಾವು ಏನೂ ಮಾತನಾಡಬಾರದು: ಕೆ.ಎನ್.ರಾಜಣ್ಣ ಕಿಡಿ

kn rajanna
25/08/2025


Provided by

ತುಮಕೂರು:  ಕೆಪಿಸಿಸಿ ಅಧ್ಯಕ್ಷರು  RSS ಗೀತೆನೂ ಹಾಡಬಹುದು ಏನು ಬೇಕಾದ್ರೂ ಮಾಡಬಹುದು. ಆದ್ರೆ ನಾವು ಮಾತ್ರ ಏನೂ ಮಾಡುವ ಹಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಇತ್ತೀಚೆಗೆ ಸಚಿವ ಸ್ಥಾನದಿಂದ ವಜಾಗೊಂಡಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಡಿಕೆಶಿ ಅಮಿತ್ ಶಾ ಜೊತೆ ಹೋಗಿ ಸದ್ಗುರು ಜೊತೆ ಡಯಾಸ್ ಮೇಲೆ ಕುಳಿತುಕೊಳ್ಳಬಹುದು, ಆದ್ರೆ ನಾವು ಮಾತ್ರ ಮಾಡುವ ಹಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರು ಪ್ರಯಾಗ್ ರಾಜ್‍ಗೆ  ಹೋಗಿ ಸ್ನಾನ ಮಾಡಿಬಿಟ್ಟರೆ ಬಡವರ ಹೊಟ್ಟೆ ತುಂಬುತ್ತಾ ಅಂತ ಹೇಳಿದ್ದರು. ಅದಕ್ಕೆ ವಿರುದ್ಧವಾಗಿ ಡಿಕೆಶಿ ಅಲ್ಲಿಗೂ ಹೋಗಿದ್ದರು. ಅಂಬಾನಿ ಮನೆ ಮದುವೆಯನ್ನು ರಾಹುಲ್ ಗಾಂಧಿಯವರು ಸ್ವೀಕಾರ ಮಾಡಲು ಹಿಂದೆ ಮುಂದೆ ನೋಡಿದ್ರು. ಅವರು ಸ್ವೀಕಾರ ಮಾಡೋದಿಲ್ಲ. ಅಂತಹ ಮದುವೆಗೆ ಡಿಕೆಶಿ ಕುಟುಂಬ ಸಮೇತ ಹೋಗ್ತಾರೆ ಎಂದು ರಾಜಣ್ಣ ಟೀಕಿಸಿದ್ರು.

ನಾವು ಎಂಎಲ್ ಎಗಳ ಸಭೆ ಕರೆಯೋ ಹಾಗಿಲ್ಲ, ಬೇರೆಯವರು ಕರೆಯಬಹುದು, ಮಾತನಾಡಬಹುದು. ಇವೆಲ್ಲದಕ್ಕೆ ಸೂಕ್ತ ಸಮಯದಲ್ಲಿ ಸೂಕ್ತ ಉತ್ತರ ಕೊಡ್ತೀನಿ ಅಂತ ಅವರು ಅಸಮಾಧಾನ ಹೊರ ಹಾಕಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ