ಪಲ್ಗುಣಿ ಶ್ರೀ ಕಾಲನಾಥೇಶ್ವರ ಸ್ವಾಮಿಯ ಬ್ರಹ್ಮರಥಕ್ಕೆ ಕೊಟ್ಟಿಗೆಹಾರದಲ್ಲಿ ಅದ್ದೂರಿ ಸ್ವಾಗತ - Mahanayaka

ಪಲ್ಗುಣಿ ಶ್ರೀ ಕಾಲನಾಥೇಶ್ವರ ಸ್ವಾಮಿಯ ಬ್ರಹ್ಮರಥಕ್ಕೆ ಕೊಟ್ಟಿಗೆಹಾರದಲ್ಲಿ ಅದ್ದೂರಿ ಸ್ವಾಗತ

brahmaratha
11/03/2025

ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಪಲ್ಗುಣಿ ಶ್ರೀ ಕಾಲನಾಥೇಶ್ವರ ಸ್ವಾಮಿ ದೇವಾಲಯಕ್ಕೆ ಅರ್ಪಣೆ ಆಗಲಿರುವ ಶ್ರೀ ಬ್ರಹ್ಮರಥವು ಇಂದು ಮಂಗಳವಾರ ಮುಂಜಾನೆ ಉಡುಪಿ ಜಿಲ್ಲೆಯ ಕೋಟೇಶ್ವರದ ಕುಂಬಾಸಿಯಿಂದ ವೈಭವದಿಂದ ಹೊರಟು, ಸಂಜೆ 5 ಗಂಟೆಗೆ ಕೊಟ್ಟಿಗೆಹಾರ ತಲುಪಿತು.

ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಕ್ತಿಪೂರ್ಣ ವಾತಾವರಣದಲ್ಲಿ ರಥವನ್ನು ಸ್ವಾಗತಿಸಿದರು. ಕೊಟ್ಟಿಗೆಹಾರದಿಂದ ಪಲ್ಗುಣಿ ದೇವಸ್ಥಾನದವರೆಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು. ಭಜನೆಗೋಷ್ಠಿ, ಮಂಗಳವಾದ್ಯ, ಹೂವಿನ ಅಲಂಕಾರ ಹಾಗೂ ದೀಪಾರಾಧನೆ ನಡುವೆ ರಥವನ್ನು ದೇವಸ್ಥಾನಕ್ಕೆ ಸಮರ್ಪಿಸಲಾಯಿತು.

ಈ ಮಹೋತ್ಸವದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಸಬ್ಬೆನಹಳ್ಳಿ ಸುಧೀರ್ ಗೌಡರ ನೇತೃತ್ವದಲ್ಲಿ ಸಮಿತಿ ಸದಸ್ಯರು, ಊರಿನ ಗ್ರಾಮಸ್ಥರು, ಅಕ್ಕಪಕ್ಕದ ಊರಿನ ಭಕ್ತಾದಿಗಳು ಸೇರಿದಂತೆ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು.

ಗ್ರಾಮದಲ್ಲಿ ಆಧ್ಯಾತ್ಮಿಕತೆಯ ಪರಿಮಳ ಮೂಡಿಸಿದ್ದ ಈ ವೈಭವದ ಕ್ಷಣ ಭಕ್ತಾದಿಗಳಿಗೆ ಅನನ್ಯ ಅನುಭವ ನೀಡಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.


Provided by
Provided by

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ