ಯೂನಿಫಾರಂ ಇಲ್ಲ ಅಂತ ಮನನೊಂದು ದುಡುಕಿನ ನಿರ್ಧಾರ ತೆಗೆದುಕೊಂಡ ವಿದ್ಯಾರ್ಥಿನಿ - Mahanayaka

ಯೂನಿಫಾರಂ ಇಲ್ಲ ಅಂತ ಮನನೊಂದು ದುಡುಕಿನ ನಿರ್ಧಾರ ತೆಗೆದುಕೊಂಡ ವಿದ್ಯಾರ್ಥಿನಿ

nandita
24/06/2025

ಚಿಕ್ಕಮಗಳೂರು: ಯೂನಿಫಾರಂ ಇಲ್ಲ ಎಂದು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೇರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ.

ನಂದಿತಾ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.  ಶಾಲೆಯಲ್ಲಿ ಸಮವಸ್ತ್ರ ಧರಿಸದ ಹಿನ್ನಲೆ ಶಿಕ್ಷಕರು ಯೂನಿಫಾರಂ ಯಾಕೆ ಹಾಕಿಲ್ಲ ಎಂದು ಕೇಳಿದ್ದರು ಎನ್ನಲಾಗಿದೆ.

ವಿದ್ಯಾರ್ಥಿನಿ ಎರಡು ವರ್ಷ ಶಾಲೆ ಬಿಟ್ಟಿದ್ದಳು. ಹಾಗಾಗಿ ಆಕೆಯ ಬಳಿ ಹಳೆಯ ಯೂನಿಫಾರಂ ಕೂಡ ಇರಲಿಲ್ಲ, ಮನೆಗೆ ಬಂದು ಪೋಷಕರ ಬಳಿ ಯೂನಿಫಾರಂ ಬೇಕು ಎಂದು ವಿದ್ಯಾರ್ಥಿನಿ ಕೇಳಿದ್ದಳು. ಆದರೆ ಬಾಲಕಿಯ ತಂದೆ ಎರಡು ದಿನದಲ್ಲಿ ವ್ಯವಸ್ಥೆ ಮಾಡಿಕೊಡುವುದಾಗಿ ಹೇಳಿದ್ದರು ಎನ್ನಲಾಗಿದೆ.

ಯೂನಿಫಾರಂ ಇಲ್ಲದ ಕಾರಣ ತೀವ್ರವಾಗಿ ನೊಂದಿದ್ದ ವಿದ್ಯಾರ್ಥಿನಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು  ಆಸ್ಪತ್ರೆಗೆ ದಾಖಲಿಸಿ, ಜೀವ ಉಳಿಸಲು ಯತ್ನಿಸಲಾಯಿತು, ಆದರೂ ಬಾಲಕಿ ಸಾವನ್ನಪ್ಪಿದ್ದಾಳೆ.

ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ  ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ