ದಕ್ಷಿಣ ಕನ್ನಡದ ಯುವಕನ ಮನೆಯ ಮುಂದೆ ಧರಣಿ ನಡೆಸಿದ ಉತ್ತರಭಾರತದ ಯುವತಿ!

07/02/2024
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಧರಣಿ ನಡೆಸಿದ ಘಟನೆ ಮಂಗಳವಾರ ವರದಿಯಾಗಿದೆ.
ಉತ್ತರ ಭಾರತದ ಜಲಂದರ್ ಮೂಲದ ಯುವತಿ, ಯುವಕನ ಮನೆಯ ಮುಂದೆ ಪ್ರತಿಭಟನೆ ನಡೆಸಿದ ಯುವತಿಯಾಗಿದ್ದಾಳೆ. ಈಕೆ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮ ಬೆಳೆದು, ಹಣಕಾಸಿನ ವ್ಯವಹಾರಗಳೂ ನಡೆದಿದೆ ಎನ್ನಲಾಗಿದೆ.
ಮಂಗಳವಾರ ಯುವಕನ ಮನೆಯ ಮುಂದೆ ಬಂದ ಸಂತ್ರಸ್ತ ಯುವತಿ, ಯುವಕನನ್ನು ತನಗೆ ಒಪ್ಪಿಸುವಂತೆ ಪಟ್ಟು ಹಿಡಿದಿದ್ದಾಳೆ.
ವಿಚಾರ ತಿಳಿದು ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ. ಸ್ಥಳದಲ್ಲಿ ಎರಡು ಸಮುದಾಯದ ಜನರು ಸೇರಿದ್ದರಿಂದಾಗಿ ಪೊಲೀಸರು ಭದ್ರತೆ ಒದಗಿಸಿದರು.