ಎಬಿವಿಪಿ 76ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ | ಭಾರತ ದೇಶದ ಈ ಮಣ್ಣಿಗೆ ಪೂರಕವಾಗಿ ಎಬಿವಿಪಿ ಕೆಲಸ ಮಾಡುತ್ತಿದೆ: ಬಸವರಾಜ ಹಳ್ಳಿ
ಔರಾದ್: ಜುಲೈ 9, 1949ರಲ್ಲಿ ಸ್ಥಾಪನೆಯಾದ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತನ್ನ 76 ವರ್ಷದ ಸುದೀರ್ಘ ದಾರಿಯಲ್ಲಿ ‘ವಿದ್ಯಾರ್ಥಿಶಕ್ತಿ – ರಾಷ್ಟ್ರಶಕ್ತಿ’ ಎಂಬ ಸಂದೇ ಶದೊಂದಿಗೆ ಕಾಲೇಜಿನ ಕ್ಯಾಂಪಸ್ ನಲ್ಲಿರುವ ಸಾಮಾನ್ಯ ವಿದ್ಯಾರ್ಥಿಯನ್ನು ಈ ದೇಶದ ಶಕ್ತಿಯನ್ನಾಗಿ ಬದಲಾವಣೆ ಮಾಡುವ ಕಾರ್ಯವನ್ನು ಮಾಡಿಕೊಂಡು ಬರುತ್ತಿದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರವನ್ನು ನಿರ್ಮಾಣಮಾಡುವ ಕಾರ್ಯವನ್ನು ತನ್ನ ಕಾರ್ಯಕರ್ತರ ಮೂಲಕ ಮಾಡುತ್ತಿದೆ. ಯಾವ ಸಂಘಟನೆಗಳು ಆ ದೇಶದ ಮಣ್ಣಿಗೆ ಪೂರಕವಾಗಿ ಕೆಲಸಮಾಡುತ್ತವೆಯೋ ಆ ಸಂಘಟನೆಗಳು ಬಾನೆತ್ತರಕ್ಕೆ ಬೆಳೆಯುತ್ತವೆ ಎಂಬ ಮಾತನ್ನು ಸ್ವಾಮಿ ವಿವೇಕಾನಂದರು ಹೇಳಿದಂತೆ ಭಾರತ ದೇಶದ ಈ ಮಣ್ಣಿಗೆ ಪೂರಕವಾಗಿ ಎಬಿವಿಪಿ ಕೆಲಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಂದು ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಒಳಗೊಂಡ ಸಂಘಟನೆ ಎಬಿವಿಪಿ ಆಗಿದೆ ಎಂದು ಮುಖ್ಯ ಅತಿಥಿಗಳಾದ ಬಸವರಾಜ ಹಳ್ಳಿ ಮಾತನಾಡಿದರು
ಎಬಿವಿಪಿ ಔರಾದ್ ಘಟಕದ ವತಿಯಿಂದ ಸ್ಥಾಪನ ದಿನದ ಅಂಗವಾಗಿ ನಗರದ ಪತ್ರಿಸ್ವಾಮಿ ಪಿಯು ಕಾಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತ ದೇಶದ ಕಿರೀಟ ಜಮ್ಮು — ಕಾಶ್ಮೀರದ ಲಾಲ್ ಚೌಕದಲ್ಲಿ ತಿರಂಗಾ ಧ್ವಜವನ್ನು ಹಾರಿಸಿ ಎಂಬ ಸವಾಲನ್ನು ಭಯೋತ್ಪಾದಕರು ಹಾಕುತ್ತಾರೆ. ಆಗಿನ ಪ್ರಧಾನ ಮಂತ್ರಿ ವಿ.ಪಿ.ಸಿಂಗ್ ಅವರು ಜಮ್ಮು ಯಾರೂ ಹೋಗಬಾರದು ಎಂಬ ಹೇಳಿಕೆ ನೀಡುತ್ತಾರೆ. ಆದರೆ ದೇಶದ ಚಿಂತನೆ ಮಾಡುವ ಸಂಘಟನೆಯಾದ ಎಬಿವಿಪಿ ಹತ್ತು ಸಾವಿರ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಾಶ್ಮೀರ ಚಲೋ ಮೂಲಕ ಜಮ್ಮು ಕಾಶ್ಮೀರದ ಲಾಲ್ ಚೌಕದಲ್ಲಿ ತಿರಂಗಾ ಧ್ವಜವನ್ನು ಹಾರಿಸಿ ಕಾಶ್ಮೀರ ಭಾರತ ದೇಶದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಈ ಇಡೀ ಜಗತ್ತಿಗೆ ನೀಡಿತ್ತು. ದೇಶವು ಕೋವಿಡ್ ಬಾಧಿತವಾಗಿ ಜನಜೀವನ ಸ್ಥಗಿತಗೊಂಡು ಸಂಕಷ್ಟದಲ್ಲಿದ್ದಾಗ, ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಕೂಲಿ ಕೆಲಸವನ್ನು ಮಾಡಲು ಬಂದ ಕಾರ್ಮಿಕರಿಗೆ ಫುಡ್ ಪ್ಯಾಕೆಟ್ ವಿತರಣೆ, ತಾಲೂಕು ಆಡಳಿತ, ಜಿಲ್ಲಾ ಆಡಳಿತದ ಜೊತೆಗೆ ಹೆಲ್ಪ್ ಲೈನ್ ಗಳಲ್ಲಿ ಎಬಿವಿಪಿಯ ಕಾರ್ಯಕರ್ತರು ಕಾರ್ಯನಿರ್ವಹಿಸಿದ್ದರು ಎಂದು ಅವರು ತಿಳಿಸಿದರು.
ಆಸ್ಪತ್ರೆಗ ಳಲ್ಲಿ ಸ್ವಯಂಸೇವಕರಾಗಿ ಕೆಲಸಮಾಡಿದ್ದಲ್ಲದೆ, ಅಗತ್ಯ ಬಿದ್ದಾಗ ಮೃತರಾದವರ ಅಂತ್ಯ ಸಂಸ್ಕಾರವನ್ನೂ ಮಾಡಿ, ಯಾವ ಫಲಾಪೇಕ್ಷೆಯೂ ಇಲ್ಲದೆ ಎಬಿವಿಪಿ ಕಾರ್ಯಕರ್ತರು ದುಡಿದಿದ್ದರು. ವಿದ್ಯಾರ್ಥಿಗಳಿಗೆ ಸಮಸ್ಯೆ ಆದಾಗ ಯಾವುದೇ ಸರ್ಕಾರವಿರಲಿ, ಆ ಸರ್ಕಾರದ ವಿರುದ್ಧ ಧ್ವನಿ ಎತ್ತಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಕಾರ್ಯವನ್ನು ಎಬಿವಿಪಿ ಮಾಡುತ್ತಿದೆ. ಸರ್ಕಾರಿ ಕಾಲೇಜುಗಳಿಗೆ ಮೂಲಭೂತ ಸೌಲಭ್ಯ, ಹಾಸ್ಟೆಲ್ ಗಳ ಸಂಖ್ಯೆ ಹೆಚ್ಚಳ, ಗುಣಮಟ್ಟದ ವಿದ್ಯಾರ್ಥಿಸ್ನೇಹಿ ಕಾಲೇಜು ಕ್ಯಾಂಪಸ್ ಗಳ ನಿರ್ಮಾಣಕ್ಕೆ ಒತ್ತು, ವಿದ್ಯಾರ್ಥಿವೇತನ, ಸಿಇಟಿ ಹೋರಾಟ, ಇಂತಹ ಹಲವಾರು ಹೋರಾಟಗಳನ್ನು ಎಬಿವಿಪಿ ಕಟ್ಟಿಕೊಂಡು ಬಂದಿದೆ ಎಂದು ಅವರು ಹೇಳಿದರು.
ನಗರದ ಉಪಾಧ್ಯಕ್ಷರಾದ ಹೇಮಂತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಾತನಾಡಿದರು. ಈ ಸಂದರ್ಭದಲ್ಲಿ ಪತ್ರಿಸ್ವಾಮಿ ಪಿಯು ಕಾಲೇಜಿನ ಪ್ರಾಚಾರ್ಯರಾದ ಅಖಿಲ, ಉಪನ್ಯಾಸಕರಾದ ಅನಿಲ್ ಹಿರಿಯರಾದ ಅಶೋಕ್ ಶಂಭಳ್ಳಿ, ಮಲ್ಲಿಕಾರ್ಜುನ್ ಟೆಕರಾಜ್, ಅನಿಲ ಮೇತ್ರೆ ಸುರೇಶ್ ನಗರ ಸಹ ಕಾರ್ಯದರ್ಶಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: