ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರು - Mahanayaka
10:00 AM Wednesday 10 - December 2025

ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರು

abvp protest
20/12/2022

ಮಂಗಳೂರು: ವಿ.ವಿ ಫಲಿತಾಂಶ ವಿಳಂಬದ ವಿರುದ್ದ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ,  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದ್ದು, ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಮಂಗಳೂರಿನ ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದ ಸುಮಾರು 500ರಷ್ಟಿದ್ದ ವಿದ್ಯಾರ್ಥಿಗಳನ್ನು  ಮಂಗಳೂರು ವಿ.ವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರು ತಡೆದರು. ಈ ವೇಳೆ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ್ದು, ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನೂಕಾಟ ತಳ್ಳಾಟ ನಡೆದಿದೆ.

ವಿ.ವಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸಲಾಗುತ್ತಿದ್ದು, ಇದರ ವಿರುದ್ಧ ರೊಚ್ಚಿಗೆದ್ದಿರುವ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ.  ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾಗದೇ  ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದರೂ, ವಿವಿ ತೀವ್ರ ನಿರ್ಲಕ್ಷ್ಯವಹಿಸಿದೆ. ಈ ಸಮಸ್ಯೆ ಇಂದು ನಿನ್ನೆಯ ಸಮಸ್ಯೆಯಲ್ಲ, ಆದರೆ ಇಂದಿಗೂ ಸಮಸ್ಯೆ ಬಗೆಹರಿಯದೇ ಜೀವಂತವಾಗಿದೆ ಎನ್ನುವ ಆಕ್ರೋಶ ಗಳು ಕೇಳಿ ಬಂದಿವೆ.

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ  ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್ ಯಡಪಡಿತ್ತಾಯ ಸ್ಥಳಕ್ಕೆ ಆಗಮಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ