ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಅವಘಡ: ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್  ಸಾವು - Mahanayaka

ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಅವಘಡ: ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್  ಸಾವು

06/05/2025

ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಿನಿಮಾ ಸೆಟ್ ನಲ್ಲಿದ್ದ ಜೂನಿಯರ್ ಆರ್ಟಿಸ್ಟ್  ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಮೃತಪಟ್ಟವರಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿನಿಮಾ ತಂಡಕ್ಕೆ ಶೂಟಿಂಗ್ ನಡೆಸಲು ಹಿನ್ನಡೆಯಾಗಿದೆ.

ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದಿದ್ದು, ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ