10:30 PM Tuesday 27 - January 2026

ಪೊಲೀಸ್ ಜೀಪಿನಿಂದ ಜಿಗಿದು ಆರೋಪಿ ಸಾವು: ಸಿಪಿಐ, ಪಿಎಸ್ ಐ ಸೇರಿ ಮೂವರ ವಿರುದ್ಧ ಕೇಸ್

yalanduru case
30/11/2022

ಚಾಮರಾಜನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕ ಮೃತಪಟ್ಟ ಸಂಬಂಧ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ.

ಯಳಂದೂರು ಸಿಪಿಐ ಶಿವಮಾದಯ್ಯ, ಮಾಂಬಳ್ಳಿ ಠಾಣೆ ಪಿಎಸ್ ಐ ಮಾದೇಗೌಡ ಹಾಗೂ ಕಾನ್ಸ್‌ಟೇಬಲ್ ಸೋಮಣ್ಣ ವಿರುದ್ಧ ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನ್ನ ಮಗನನ್ನು ಹಿಂಸಿಸಿ ಕೊಂದಿದ್ದಾರೆ ಎಂದು ಮೃತನ ತಾಯಿ ಮಹಾದೇವಮ್ಮ ದೂರು ಕೊಟ್ಟಿದ್ದಾರೆ.

ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ    ನಿಂಗರಾಜು(21) ಎಂಬಾತನ ವಿರುದ್ಧ  ಅಪ್ರಾಪ್ತೆಯನ್ನು ಅಪಹರಿಸಿದ ದೂರು ದಾಖಲಾಗಿತ್ತು.  ಮಂಗಳವಾರ ಆತನನ್ನು ಪೊಲೀಸರು ಠಾಣೆಗೆ ಕರೆದೊಯ್ಯವಾಗ ಪರಾರಿಯಾಗಲು ಜೀಪಿನಿಂದ ಲಿಂಗರಾಜು ಹಾರಿ ತೀವ್ರವಾಗಿ ಗಾಯಗೊಂಡಿದ್ದಾನೆ‌. ಬಳಿಕ, ಆಸ್ಪತ್ರೆಗೆ ರವಾನಿಸಲಾಯಿತರಾದರೂ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version