ರಾಜ್ಯದಲ್ಲಿ ಪ್ರತಿಷ್ಟಿತ ರಕ್ಷಾ ವಿಶ್ವ ವಿದ್ಯಾಲಯದ ಸ್ಥಾಪನೆಗೆ ಒಡಂಬಡಿಕೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ - Mahanayaka

ರಾಜ್ಯದಲ್ಲಿ ಪ್ರತಿಷ್ಟಿತ ರಕ್ಷಾ ವಿಶ್ವ ವಿದ್ಯಾಲಯದ ಸ್ಥಾಪನೆಗೆ ಒಡಂಬಡಿಕೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

aragajna
24/03/2023

ಬೆಂಗಳೂರು: ಮಾರ್ಚ್ 24ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಕರ್ನಾಟಕದ ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು, ಇಂದು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಜತೆಗೆ ಇಂದು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ, ಕರ್ನಾಟಕ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ, ರಾಜ್ಯ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರ ಉಪಸ್ಥಿತಿಯಲ್ಲಿ, ವಿಶ್ವ ವಿದ್ಯಾಲಯದ ಉಪಕುಲಪತಿ ಶ್ರೀ. ಬಿಮಲ್ ಎನ್ ಪಟೇಲ್, ಹಾಗೂ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ರಜನೀಶ್ ಗೋಯಲ್ (ಒಳಾಡಳಿತ) ಕರ್ನಾಟಕ ಸರಕಾರ, ಇವರು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕುವ ಮೂಲಕ, ದಕ್ಷಿಣ ಭಾರತದಲ್ಲಿ, ರಕ್ಷಾ ವಿಶ್ವ ವಿದ್ಯಾಲಯದ ಅಧ್ಯಯನ ಕೇಂದ್ರ ಹೊಂದಿದ, ಮೂರನೇ ರಾಜ್ಯವಾಗಿದೆ.

ನಾಡಿನ ಯುವ ಜನತೆಗೆ ಭದ್ರತೆ ಹಾಗೂ ಪೊಲೀಸ್ ಸೇವೆಗಳ ಕ್ಷೇತ್ರದಲ್ಲಿ, ಅತ್ಯಾಧುನಿಕ ತರಭೇತಿ, ಶಿಕ್ಷಣ, ಸಂಶೋಧನೆ ಇತ್ಯಾದಿ ಚಟುವಟಿಕೆ ಗಳನ್ನು ಹಮ್ಮಿಕೊಳ್ಳಲು ಹಾಗೂ ಈ ಕ್ಷೇತ್ರದಲ್ಲಿ ಅಗತ್ಯವಾಗಿ ಬೇಕಾಗಿದ್ದ “ಮಾನವ ಸಂಪನ್ಮೂಲ” ವನ್ನು ಸೃಜಿಸಲು, ಈ ವಿಶ್ವ ವಿದ್ಯಾಲಯ, ಮಹತ್ವದ ಕಾಣಿಕೆ ನೀಡಲಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು, ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಶಿವಮೊಗ್ಗ ದಲ್ಲಿ ಸ್ಥಾಪಿತ ವಾಗಲಿರುವ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ, ಎಂಟು ಎಕರೆ ಪ್ರದೇಶದಲ್ಲಿ ಪ್ರಸ್ತುತ, ಕೇಂದ್ರೀಯ ವಿದ್ಯಾಲಯ ದಲ್ಲಿರುವ ಸುಸಜ್ಜಿತ ಕಟ್ಟಡಗಳಲ್ಲಿ ರಕ್ಷಾ ವಿಶ್ವ ವಿದ್ಯಾಲಯದ ಪೀಠ ಕಾರ್ಯ ನಿರ್ವಹಿಸಲಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ, ಕಾರ್ಯಾರಂಭ ಮಾಡಲಿದೆ, ಎಂದು ರಾಜ್ಯ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ
ತಿಳಿಸಿದ್ದಾರೆ.

ರಾಷ್ಟ್ರದ ಪ್ರತಿಷ್ಠಿತ ವಿಶ್ವ ವಿದ್ಯಾಲಯದ ಅಧ್ಯಯನ ಕೇಂದ್ರವು, ಪ್ರಾರಂಭಿಕವಾಗಿ, ಡಿಪ್ಲೊಮೊ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಶಿಕ್ಷಣ ನೀಡಲಿದ್ದು, ಪೊಲೀಸ್ ವಿಜ್ಞಾನ ಮತ್ತು ಆಡಳಿತ, ಸೈಬರ್ ಸೆಕ್ಯೂರಿಟಿ ಮತ್ತು ಡಿಜಿಟಲ್ ಸಂಶೋಧನೆ, ರಕ್ಷಣಾ ನಿರ್ವಹಣೆ, ನ್ಯಾಯ ಅಪರಾಧಿಕಾರಣ ,
ಕರಾವಳಿ ಸಂರಕ್ಷಣೆ, ರಸ್ತಾ ಸುರಕ್ಷತೆ, ದೈಹಿಕ ಶಿಕ್ಷಣ ಸಂಬಂಧ ವಿಷಯ ಗಳನ್ನೂ ಒಳಗೊಂಡಂತೆ, ಪದವಿ ಹಾಗು ಸರ್ಟಿಫಿಕೇಟ್ ಅನ್ನು ಪ್ರದಾನ
ಮಾಡಲಾಗುವುದು.

ರಾಜ್ಯದ ರಕ್ಷಾ ವಿಶ್ವ ವಿದ್ಯಾಲಯದ ಕೇಂದ್ರವು, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಶಿಕ್ಷಣ, ಅಧ್ಯಯನ ಕೇಂದ್ರವಾಗಿ ಕಾರ್ಯವನ್ನು ನಿರ್ವಹಿಸುವಲ್ಲದೆ ಪೊಲೀಸ್ ಇಲಾಖೆಗೆ ವಿವಿಧ ಹುದ್ದೆಗಳಿಗೆ ಸೆರಾ ಬಯಸುವ ಅಭ್ಯರ್ಥಿಗಳಿಗೆ, ತರಭೇತಿ ಹಾಗೂ ಕೋಚಿಂಗ್ ಕೇಂದ್ರವಾಗಿಯೂ ಕಾರ್ಯ ನಿರ್ವಹಿಸಲಿದೆ.

ಶಿವಮೊಗ್ಗದ ರಕ್ಷಾ ವಿಶ್ವ ವಿದ್ಯಾಲಯದ ಕೇದ್ರವು, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತಹ ವಿವಿಧ ವಿಷಯಗಳ ಶಿಕ್ಷಣ ಪ್ರದಾನಕ್ಕೆ ಸಂಬಂಧಿಸಿದಂತೆ,ವಿಶ್ವ ಮಟ್ಟದ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ ಹಾಗೂ ಇಂತಹ ಕೇಂದ್ರವು, ರಾಜ್ಯದ, ಶಿವಮೊಗ್ಗ ಜಿಲ್ಲೆಗೆ ಮಂಜೂರಾತಿ ನೀಡಿದ ಕೇಂದ್ರ ಗೃಹ
ಇಲಾಖೆ ಸಚಿವ ಶ್ರೀ ಅಮಿತ ಶಾ ಅವರಿಗೆ ಕೃತಜ್ಞತೆ ಸಲ್ಲಿಸುವದಾಗಿ, ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ರಾಷ್ಟ್ರದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ, ಶ್ರೀ ನರೇಂದ್ರ ಮೋದಿಜಿ ಯವರು, ರಕ್ಷಾ ವಿಶ್ವವಿದ್ಯಾಲಯ ವನ್ನು, ರಾಷ್ಟ್ರದ ರಕ್ಷಣಾ ಸಂಬಂಧಿ ಶೈಕ್ಷಣಿಕ ಕ್ಷೇತ್ರದ ಮಹತ್ವದ ಸಂಸ್ಥೆಯಾಗಲಿದೆ ಎಂದಿದ್ದು, ಅಂತಹ ಒಂದು ಸಂಸ್ಥೆಯ ಕೇಂದ್ರವು ರಾಜ್ಯಕ್ಕೆ ಅದರಲ್ಲಿಯೂ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪಿತವಾಗಿ ರುವುದು ಹೆಮ್ಮೆಯ ವಿಷಯ ಎಂದೂ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ