ಶೀಘ್ರದಲ್ಲೇ ಮಹಾರಾಷ್ಟ್ರದ ಸಿಎಂ ಆಗ್ತಾರ ಅಜಿತ್ ಪವಾರ್..? ಏಕನಾಥ್ ಶಿಂಧೆಗೆ ಕೊಕ್..? - Mahanayaka
5:03 AM Wednesday 17 - December 2025

ಶೀಘ್ರದಲ್ಲೇ ಮಹಾರಾಷ್ಟ್ರದ ಸಿಎಂ ಆಗ್ತಾರ ಅಜಿತ್ ಪವಾರ್..? ಏಕನಾಥ್ ಶಿಂಧೆಗೆ ಕೊಕ್..?

03/07/2023

ನಿನ್ನೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್ ಸಿಪಿ ನಾಯಕ ಅಜಿತ್ ಪವಾರ್ ಶೀಘ್ರದಲ್ಲೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸೋಮವಾರ ಹೇಳಿದೆ.

ಸಂಸದ ಸಂಜಯ್ ರಾವತ್ ಅವರು ಏಕನಾಥ್ ಶಿಂಧೆ ಅವರನ್ನು ಸಿಎಂ ಹುದ್ದೆಯಿಂದ ತೆಗೆದುಹಾಕಲಾಗುವುದು ಮತ್ತು ಶಿವಸೇನೆಯ 16 ಬಂಡಾಯ ಶಾಸಕರನ್ನು ಅನರ್ಹಗೊಳಿಸಲಾಗುವುದು ಎಂದು ಹೇಳಿದ್ದಾರೆ.

‘ಇಂದು ನಾನು ಇದನ್ನು ಕ್ಯಾಮೆರಾ ಮುಂದೆ ಹೇಳುತ್ತಿದ್ದೇನೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಶೀಘ್ರದಲ್ಲೇ ಬದಲಾಗಲಿದ್ದಾರೆ. ಏಕನಾಥ್ ಶಿಂಧೆ ಅವರನ್ನು ಸಿಎಂ ಹುದ್ದೆಯಿಂದ ತೆಗೆದು ಹಾಕಲಾಗುತ್ತಿದೆ. ಏಕನಾಥ್ ಶಿಂಧೆ ಮತ್ತು 16 ಶಾಸಕರನ್ನು ಅನರ್ಹಗೊಳಿಸಲಾಗುವುದು’ ಎಂದು ಸಂಜಯ್ ರಾವತ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

ಬಿಜೆಪಿಯು ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಒಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ನಾವು 2024 ರ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತೇವೆ. ಎನ್ ಸಿಪಿಯ ನಾಯಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿರುವುದು ಆಘಾತಕಾರಿಯಾಗಿದೆ. ಈಗ ಆ ನಾಯಕರೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

24 ವರ್ಷಗಳ ಹಿಂದೆ ಎನ್ ಸಿಪಿಯನ್ನು ಸ್ಥಾಪಿಸಿದ ಚಿಕ್ಕಪ್ಪ ಶರದ್ ಪವಾರ್ ಅವರ ಬೆಂಬಲದಿಂದ ಬೆಳೆದು ಅಜಿತ್ ಪವಾರ್ ಅವರು ಈಗ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದಾರೆ. ಶಿಂಧೆ-ಬಿಜೆಪಿ ಸರ್ಕಾರದಲ್ಲಿ ಎಂಟು ಎನ್‌ಸಿಪಿ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿ ಹುದ್ದೆಗಾಗಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವನ್ನು ಸೇರಲಿಲ್ಲ ಎಂದು ಸಾಮ್ನಾ ತನ್ನ ಸಂಪಾದಕೀಯದಲ್ಲಿ ಹೇಳಿಕೊಂಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಶಿವಸೇನೆಯ ಬಂಡಾಯ ಶಾಸಕರನ್ನು ಶೀಘ್ರದಲ್ಲೇ ಅನರ್ಹಗೊಳಿಸಲಾಗುವುದು ಮತ್ತು ಪವಾರ್ ಅವರನ್ನು ಸಿಎಂ ಪಟ್ಟಕ್ಕೇರಿಸಲಾಗುತ್ತದೆ ಎಂದು ಅದು ಹೇಳಿದೆ.

ಈ ಹೊಸ ಬೆಳವಣಿಗೆಯು ರಾಜ್ಯದ ಜನರಿಗೆ ಸರಿ ಹೊಂದುವುದಿಲ್ಲ. ರಾಜ್ಯವು ಅಂತಹ ಯಾವುದೇ ರಾಜಕೀಯ ಸಂಪ್ರದಾಯವನ್ನು ಹೊಂದಿಲ್ಲ. ಅದನ್ನು ಜನರು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಸಾಮ್ನಾ ಪತ್ರಿಕೆ ಹೇಳಿದೆ. ಅವರ ಹಿಂದೂತ್ವ ಈಗ ಮುಗಿದಿದೆ. ಶಿಂಧೆ ಮತ್ತು ಅವರ ಬಂಡಾಯ ಸಹೋದ್ಯೋಗಿಗಳನ್ನು ಅನರ್ಹಗೊಳಿಸುವ ದಿನ ದೂರವಿಲ್ಲ ಎಂದು ಮರಾಠಿ ಪತ್ರಿಕೆ ಸಾಮ್ನಾ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಅಜಿತ್ ಪವಾರ್ 70,000 ಕೋಟಿ ರೂ.ಗಳ ನೀರಾವರಿ ಹಗರಣದಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ