ತಾರತಮ್ಯ: ಕುಂಭಮೇಳದಲ್ಲಿ ಸನಾತನ ಆಹಾರ ಮಳಿಗೆಗಳಿಗೆ ಮಾತ್ರವೇ ಅವಕಾಶ ನೀಡಿ: ಅಖಿಲ ಭಾರತೀಯ ಅಖಾಡ ಪರಿಷತ್ ಆಗ್ರಹ - Mahanayaka

ತಾರತಮ್ಯ: ಕುಂಭಮೇಳದಲ್ಲಿ ಸನಾತನ ಆಹಾರ ಮಳಿಗೆಗಳಿಗೆ ಮಾತ್ರವೇ ಅವಕಾಶ ನೀಡಿ: ಅಖಿಲ ಭಾರತೀಯ ಅಖಾಡ ಪರಿಷತ್ ಆಗ್ರಹ

10/10/2024


Provided by

ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ಕುಂಭಮೇಳದಲ್ಲಿ ಸನಾತನ ಆಹಾರ ಮಳಿಗೆಗಳಿಗೆ ಮಾತ್ರವೇ ಅವಕಾಶ ನೀಡಬೇಕು ಎಂದು ಹಿಂದೂ ಸನ್ಯಾಸಿ ಸಂಘಟನೆಗಳಲ್ಲಿ ಒಂದಾಗಿರುವ ಅಖಿಲ ಭಾರತೀಯ ಅಖಾಡ ಪರಿಷತ್ ಆಗ್ರಹಿಸಿದೆ.

ಪ್ರಯಾಗ್ ರಾಜ್ ನಲ್ಲಿ ನಡೆಯಲಿರುವ ಕುಂಭಮೇಳದ ಪರಿಶುದ್ಧತೆಯನ್ನು ಸಂರಕ್ಷಿಸುವುದರ ಭಾಗವಾಗಿ ಹೀಗೆ ಮಾಡಬೇಕು ಎಂದು ಅಖಾಡ ಆಗ್ರಹಿಸಿದೆ. ಹಾಗೆಯೇ ಈ ಕುಂಭ ಮೇಳಕ್ಕೆ ಸಂಬಂಧಿಸಿ ಉರ್ದು ಪದಗಳನ್ನು ತೆರವುಗೊಳಿಸಬೇಕು ಎಂದು ಕೂಡ ಅದು ಒತ್ತಾಯಿಸಿದೆ.

ಸನಾತನ ಅಲ್ಲದವರಿಗೆ ಆಹಾರದ ಮಳಿಗೆಗಳನ್ನು ಸ್ಥಾಪಿಸಲು ಅವಕಾಶ ನೀಡಬಾರದು. ಅವರನ್ನು ನಿರ್ಬಂಧಿಸುವ ಬಗ್ಗೆ ನಿಯಮ ರೂಪಿಸಬೇಕು. ದೀಪಾವಳಿಯ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಈ ಬಗ್ಗೆ ಪ್ರಸ್ತಾಪನೆಯನ್ನು ನೀಡಲಾಗುವುದು ಎಂದು ಅಖಿಲ ಭಾರತೀಯ ಅಖಾಡ ಪರಿಷತ್ ನ ಮುಖಂಡ ಮಹಾಂತ ರವೀಂದ್ರಪುರಿ ಆಗ್ರಹಿಸಿದ್ದಾರೆ.

ಕುಂಭಮೇಳದಲ್ಲಿ ಪ್ರಮುಖ ಕಾರ್ಯಕ್ರಮವಾಗಿರುವ ಶಾಹಿ ಸ್ನಾನ್ ಮತ್ತು ಪೇಶ್ ವಾಯ್ ಮುಂತಾದ ಉರ್ದು ಪದಗಳನ್ನು ಹಿಂದಿಗೆ ಬದಲಿಸಬೇಕು. ಹೀಗೆ ಹೆಸರು ಬದಲಿಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗೆ ನಾವು ತಿಳಿಸಿದ್ದೇವೆ ಮತ್ತು ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದವರು ಹೇಳಿದ್ದಾರೆ ಎಂದವರು ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ