ವಯನಾಡ್ ಗೆ ಶಶಿ ತರೂರ್ ಭೇಟಿ: ‘ಸ್ಮರಣೀಯ’ ಎಂದಿದ್ದಕ್ಕೆ ಕಾಂಗ್ರೆಸ್ ಸಂಸದನ ವಿರುದ್ಧ ಟ್ರೋಲ್
ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಭೂಕುಸಿತ ಪೀಡಿತ ವಯನಾಡ್ ಗೆ ಭೇಟಿ ನೀಡಿದ್ದನ್ನು ‘ಸ್ಮರಣೀಯ’ ಎಂದು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ನೆಗೆಟಿವ್ ಆಗಿ ಟ್ರೋಲ್ ಮಾಡಿದ ಹಿನ್ನೆಲೆಯಲ್ಲಿ ಶಶಿ ತರೂರ್ ಅವರು, ‘ಸ್ಮರಣೀಯ’ ಎಂಬ ಪದದ ಬಳಕೆಯು ‘ಮರೆಯಲಾಗದ’ ಮತ್ತು ಗಮನಾರ್ಹವಾದದ್ದನ್ನು ಸೂಚಿಸುವ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
‘ಎಕ್ಸ್’ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಪೋಸ್ಟ್ ನಲ್ಲಿ ತರೂರ್, “ಎಲ್ಲಾ ಟ್ರೋಲ್ ಗಳಿಗೆ ‘ಸ್ಮರಣೀಯ’ ವ್ಯಾಖ್ಯಾನ. ಸ್ಮರಣೀಯವಾದ ವಿಷಯವು ನೆನಪಿಟ್ಟುಕೊಳ್ಳಲು ಯೋಗ್ಯವಾಗಿದೆ ಅಥವಾ ನೆನಪಿನಲ್ಲಿಡುವ ಸಾಧ್ಯತೆಯಿದೆ. ಯಾಕೆಂದರೆ ಅದು ವಿಶೇಷ ಅಥವಾ ಮರೆಯಲಾಗದ್ದು. ನಾನು ಹೇಳಿದ್ದು ಇಷ್ಟೇ” ಎಂದಿದ್ದಾರೆ.
ಇದಕ್ಕೂ ಮುನ್ನ ತಿರುವನಂತಪುರಂ ಸಂಸದರು ಕನಿಷ್ಠ 308 ಜನರನ್ನು ಬಲಿ ತೆಗೆದುಕೊಂಡ ಭಾರಿ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ಭಾನುವಾರ ಐದನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆಯಲ್ಲಿ ಕಾಂಗ್ರೆಸ್ ನಾಯಕ ಸಹಾಯ ಮಾಡಿದರು.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಇನ್ನು ಶಶಿ ತರೂರ್ ಅವರು ಈ ಕುರಿತಾದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ವಿಪತ್ತಿನಿಂದ ಮನೆಗಳನ್ನು ಕಳೆದುಕೊಂಡ ಮತ್ತು ಪ್ರಸ್ತುತ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿರುವ ವ್ಯಕ್ತಿಗಳಿಗಾಗಿ ತಮ್ಮ ಕಚೇರಿ ಆಯೋಜಿಸಿದ್ದ ಪರಿಹಾರ ಸಾಮಾಗ್ರಿಗಳನ್ನು ಇಳಿಸಲು ಸಕ್ರಿಯವಾಗಿ ಸಹಾಯ ಮಾಡುತ್ತಿರುವುದನ್ನು ಕಾಣಬಹುದು. ಅವರು ಪೀಡಿತ ವ್ಯಕ್ತಿಗಳೊಂದಿಗೆ ನೇರವಾಗಿ ತೊಡಗಿಸಿಕೊಳ್ಳುವುದನ್ನು, ಅವರ ಅನುಭವಗಳನ್ನು ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಕೇಳುವುದನ್ನು ಇದರಲ್ಲಿ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth




























